Breaking News

ಗೃಹಲಕ್ಷ್ಮಿ’ ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ : ಈ ‘‍ಧೃಡೀಕರಣ ಪತ್ರ’ ನೀಡಲು ರಾಜ್ಯ ಸರ್ಕಾರ ನಿರ್ಧಾರ

Spread the love

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.

 

ಹಲವು ಯಜಮಾನಿಯರ ಖಾತೆಗೆ ಇನ್ನೂ ಕೂಡ ಗೃಹಲಕ್ಷ್ಮಿ ಹಣ ಬಂದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್) ನಿರ್ದೇಶನಾಲಯದೊಂದಿಗೆ ಸಭೆ ನಡೆಸಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಗೃಹಲಕ್ಷ್ಮಿಯರಿಗೆ ಐಟಿ/ಜಿಎಸ್ಟಿ ವ್ಯಾಪ್ತಿಗೆ ಬರುವುದಿಲ್ಲ ಎಂದು ದೃಢೀಕರಣ ಪತ್ರ ನೀಡಲು ಸರ್ಕಾರ ನಿರ್ಧರಿಸಿದೆ.
ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿದ್ದು, ವಾಸ್ತವವಾಗಿ ತೆರಿಗೆ ಪಾವತಿಸದಿದ್ದರೂ ಐಟಿ (ಆದಾಯ ತೆರಿಗೆ) ಅಥವಾ ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ತೆರಿಗೆದಾರರರೆಂದು ಪೋರ್ಟಲ್ನಲ್ಲಿ ತೋರಿಸುತ್ತಿತ್ತು. ಇದರಿಂದಾಗಿ ಯೋಜನೆಗೆ ಫಲಾನುಭವಿಗಳಾಗಲು ನೋಂದಣಿ ಮಾಡಿಸಿ ಆರು ತಿಂಗಳಾಗಿದ್ದರೂ ಬಹಳಷ್ಟು ಮಹಿಳೆಯರು ಸರ್ಕಾರದಿಂದ ಹಣ ಪಡೆಯಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ಇಲಾಖೆ ಯಜಮಾನಿಯರಿಗೆ ಐಟಿ/ಜಿಎಸ್ಟಿ ವ್ಯಾಪ್ತಿಗೆ ಬರುವುದಿಲ್ಲ ಎಂದು ದೃಢೀಕರಣ ಪತ್ರ ನೀಡಲು ಸರ್ಕಾರ ನಿರ್ಧರಿಸಿದೆ.


Spread the love

About Laxminews 24x7

Check Also

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Spread the loveಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ