Breaking News

ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನ ಓಕೆ: ಆಗದಿರಲಿ ಭಾರತದ ಸಮಗ್ರತೆಗೆ ಧಕ್ಕೆ

Spread the love

ಸ್ವಲ್ಪ ನೆನಪು ಮಾಡಿಕೊಳ್ಳಿ. 2018 ವಿಧಾನಸಭೆ ಚುನಾವಣೆಗೆ 10 ತಿಂಗಳು ಸಮಯ ಇದೆ ಎನ್ನುವಾಗ ನಡೆದ ಆ ಚರ್ಚೆ. ಆಗ ಚರ್ಚೆಗೆ ರಾಜ್ಯದಲ್ಲಿ ದೊಡ್ಡ ರಾಜಕೀಯ ವಿಷಯ ಇರಲಿಲ್ಲ. ಆಡಳಿತರೂಢ ಕಾಂಗ್ರೆಸ್ ವಿರೋಧಿ ಅಲೆ ಹುಟ್ಟುವ ಲಕ್ಷಣ ಇತ್ತು. ಆಗ ಮುಖ್ಯಮಂತ್ರಿ ಆಗಿದ್ದ, ಕರ್ನಾಟಕದ ಇಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಮ್ಮಿಂದೊಮ್ಮೆಲೆ ಹಿಂದಿ-ವಿರೋಧಿ ಚಳವಳಿಯ ತಿದಿ ಒತ್ತಿದರು.
ಒಮ್ಮೆಲೆ ಎಲ್ಲೆಲ್ಲೂ ಚರ್ಚೆ ಮೊಳಗಿತು. ಕನ್ನಡದ ಅಸ್ಮಿತೆ ಉಳಿಸಿ ಎಂಬ ಉದ್ಘೋಷ ಎಲ್ಲೆಲ್ಲೂ ಹರಡಿತು. ಬೆಂಗಳೂರಿನಲ್ಲಿ ಕೆಲವರು ರಸ್ತೆಗೆ ಇಳಿದರು, ಮೆಟ್ರೋ ಸ್ಟೇಶನ್​ಗೆ ಮುತ್ತಿಗೆ ಹಾಕಿ, ಹಿಂದಿಯಲ್ಲಿದ್ದ ಬೋರ್ಡ್​ಗಳಿಗೆ ಕಪ್ಪು ಮಸಿ ಬಳಿದರು. ನಾವೆಲ್ಲ ಖುಷಿ ಪಟ್ಟೆವು. ಪ್ರಧಾನಿ ನರೇಂದ್ರ ಮೋದಿಯನ್ನು ಸಿದ್ಧರಾಮಯ್ಯ ಹಿಗ್ಗಾಮುಗ್ಗಾ ಬಯ್ದರು. ಆಗ ಎಲ್ಲ ಅಂದು ಕೊಂಡಿದ್ದು-ಮೋದಿ ಎದುರಿಸಲು ಎದೆಗಾರಿಕೆ ಇರುವ ಏಕೈಕ ನಾಯಕ ಸಿದ್ಧರಾಮಯ್ಯ ಎಂದು. ಬಿಜೆಪಿ ಹಿಂದಿ ಪರ, ಕಾಂಗ್ರೆಸ್ ಹಿಂದಿ ಹೇರಿಕೆ ವಿರುದ್ಧ ಎಂದು ರಾಷ್ಟ್ರೀಯ ಟಿವಿ ಚಾನೆಲ್​ಗಳಲ್ಲಿ ಕೂಡ ಬಿಂಬಿತವಾಯ್ತು. ಅದು 2019 ರ ಚುನಾವಣೆವರೆಗೆ ಮುಂದುವರಿಯಿತು.

ಈಗ ನೇರವಾಗಿ 2024 ಫೆಬ್ರವರಿಗೆ ಬರೋಣ. ನಮ್ಮ ತೆರಿಗೆ ನಮ್ಮ ಹಕ್ಕು (Our Tax our Rights ) ಎಂಬ ಉದ್ಘೋಷದೊಂದಿಗೆ ಮತ್ತೆ ಸಿದ್ದರಾಮಯ್ಯ (Siddaramaiah) ತಯಾರಾಗಿ ನಿಂತಿದ್ದಾರೆ. ಈ ಬಾರಿ ಈ ವಿಚಾರ ಬರೀ ಹೇಳಿಕೆಯಲ್ಲಿ ಮುಗಿಯುತ್ತಿಲ್ಲ. ಇದೇ ವಿಷಯ ಇಟ್ಟುಕೊಂಡು ಅವರು ಮತ್ತು ಅವರ ಮಂತ್ರಿಮಂಡಲದ ಸದಸ್ಯರು ದೆಹಲಿಯ ಜಂತರ್ ಮಂತರ್ನಲ್ಲಿ ‘ಗಾಂಧಿಗಿರಿ’ ನಡೆಸಲಿದ್ದಾರೆ.

ಗಾಂಧೀಜಿಯೊಂದಿಗೆ ಸಿದ್ದು ಮತ್ತು ಇತರೇ ಮಂತ್ರಿಗಳು ದೆಹಲಿಯತ್ತ ಹೊರಟ ಜಾಹೀರಾತು ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಈ ಹೋರಾಟಕ್ಕೆ ಗಾಂಧೀಜಿಯನ್ನು ಕರೆ ತಂದಿದ್ದಾಯ್ತು. ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿರುವ ಅವರು, ವಿರೋಧ ಪಕ್ಷಗಳ ನಾಯಕರುಗಳಿಗೆ ಪತ್ರ ಬರೆದು ನೀವು ಬನ್ನಿ, ನಿಮ್ಮವರನ್ನು ಕರೆತನ್ನಿ ಎಂಬ ಆಹ್ವಾನ ಕೂಡ ನೀಡಿದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ