ಬೆಂಗಳೂರು, : “ಅದು ಭಾರತೀಯ ಜನತಾ ಪಕ್ಷ (bharatiya janata party) ಅಲ್ಲ, ಬ್ರಿಟಿಷ್ ಜನತಾ ಪಕ್ಷ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಕೂತು ಅಂಕಿ ಅಂಶಗಳನ್ನು ಹೇಳಿದರೆ ಆಗುವುದಿಲ್ಲ. 4 ಲಕ್ಷ ಚಿಲ್ಲರೆ ಎಲ್ಲಿ, ಇವರು ಕೊಟ್ಟಿರುವ 1 ಲಕ್ಷ ಚಿಲ್ಲರೆ ಎಲ್ಲಿ”? ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ವಾಗ್ದಾಳಿ ನಡೆಸಿದರು.
ತೆರಿಗೆ ಹಣದಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮಾಡಿತು. ಬಳಿಕ ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಚಿವ ಮಧು ಬಂಗಾರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೆಹಲಿಯಲ್ಲಿ ಕೂತು ಅಂಕಿ ಅಂಶಗಳನ್ನು ಹೇಳಿದರೆ ಆಗುವುದಿಲ್ಲ. 4 ಲಕ್ಷ ಚಿಲ್ಲರೆ ಎಲ್ಲಿ, ಇವರು ಕೊಟ್ಟಿರುವ 1 ಲಕ್ಷ ಚಿಲ್ಲರೆ ಎಲ್ಲಿ” ಎಂದು ತಿರುಗೇಟು ನೀಡಿದರು.