Breaking News
Home / Uncategorized / ನಿಮ್ಮನ್ನು ಮಿಸ್ ಮಾಡಿಕೊಳ್ತೇವೆ- BIGBOSS TEAM

ನಿಮ್ಮನ್ನು ಮಿಸ್ ಮಾಡಿಕೊಳ್ತೇವೆ- BIGBOSS TEAM

Spread the love

ಬೆಂಗಳೂರು: ಹಿರಿಯ ಪತ್ರಕರ್ತ, ಖ್ಯಾತ ಲೇಖಕ ರವಿ ಬೆಳಗೆರೆ ಅವರ ನಿಧನಕ್ಕೆ ನಟ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ರವಿ ಬೆಳಗೆರೆ ಅವರೊಂದಿಗಿನ ನೆನಪುಗಳನ್ನು ಮೆಲುಕು ಹಾಕಿರುವ ನಟ ಸುದೀಪ್, ಬಿಸ್‍ಬಾಸ್ ಕಾರ್ಯಕ್ರಮದ ಸಂದರ್ಭದ ಎರಡು ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವೇದಿಕೆಯಲ್ಲಿದ್ದ ಈ ಫೋಟೋದಲ್ಲಿ ನಾನು ಅವರನ್ನು ಕೊನೆಯದಾಗಿ ನೋಡಿದ್ದೆ. ಉಳಿದ ಸ್ಪರ್ಧಿಗಳು ಖಂಡಿತ ಈ ಕ್ಷಣವನ್ನು ತಮ್ಮ ಜೀವನದಲ್ಲಿ ನೆನಪಿಟ್ಟುಕೊಳ್ಳುತ್ತಾರೆ. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅವರ ಕುಟುಂಬಕ್ಕೆ ನನ್ನ ಸಂತಾಪ, ಅವರ ಆತ್ಮ ಶಾಂತಿಯಿಂದ ವಿಶ್ರಾಂತಿ ಪಡೆಯಬೇಕೆಂದು ಪ್ರಾರ್ಥನೆ ಮಾಡುವುದಾಗಿ ಸುದೀಪ್ ಟ್ವೀಟ್ ಮಾಡಿ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ರವಿ ಬೆಳಗೆರೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಟಿ ದೀಪಿಕಾ ದಾಸ್, ಹೊರ ಜಗತ್ತಿನಲ್ಲಿ ರವಿ ಬೆಳಗೆರೆ ಅವರ ಬಗ್ಗೆ ಒಂದು ಅಭಿಪ್ರಾಯವಿತ್ತು. ಆದರೆ ಬಿಗ್‍ಬಾಸ್ ಮನೆಯಲ್ಲಿ ಆ ರೀತಿ ಇರಲಿಲ್ಲ. ಎಲ್ಲರನ್ನೂ ನಗಿಸ್ತಾ ಇದ್ದರು. ಅವರೊಂದಿಗೆ ಇದ್ದಾಗ ಸಮಯ ಹೋಗಿದ್ದೇ ಗೊತ್ತಾಗ್ತಾ ಇರಲಿಲ್ಲ. ಅವರೊಂದಿಗೆ ಕಳೆದ ಸಮಯ ಜೀವನ ಪರ್ಯಂತ ನೆನಪಿರುತ್ತದೆ ಎಂದು ಹೇಳಿ ಭಾವುಕರಾಗಿದ್ದರು.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ