ಮಾತಿನಿಂದ ಮೈತ್ರಿಗೆ ಧಕ್ಕೆ ತರಬೇಡಿ: ರಾಜ್ಯ ನಾಯಕರಿಗೆ ಶಾ ಎಚ್ಚರಿಕೆ

Spread the love

ಮೈಸೂರು: ಜೆಡಿಎಸ್ ನೊಂದಿಗೆ (JDS) ಮೈತ್ರಿ ಹೈಕಮಾಂಡ್ ನಿರ್ಧಾರ. ಈ ವಿಚಾರದಲ್ಲಿ ಯಾರೂ ಮಾತನಾಡಬಾರದು ಎಂದು ಕೇಂದ್ರ ಗೃಹ ಮಂತ್ರಿ (home minister) ಅಮಿತ್‌ ಶಾ (Amit Shah) ರಾಜ್ಯ ನಾಯಕರಿಗೆ ಎಚ್ಚರಿಕೆ ನೀಡಿದರು.

ಬಿಜೆಪಿ (BJP) ನಾಯಕರ ಜೊತೆ ಮೈಸೂರಿನ (mysore) ಖಾಸಗಿ ಹೊಟೇಲ್ ನಲ್ಲಿ ಮೈಸೂರು, ಚಾಮರಾಜನಗರ (chamrajnagar), ಮಂಡ್ಯ (mandya), ಹಾಸನ (hassan) ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಸಭೆ ನಡೆಸಿದ ಅವರು, ಮೈತ್ರಿ ಧರ್ಮ ಪಾಲಿಸುವಂತೆ ಎಲ್ಲರಿಗೂ ಸೂಚನೆ ನೀಡಿದರು.

 

ಕಳೆದಬಾರಿ ಕಾಂಗ್ರೆಸ್ (congress) – ಜೆಡಿಎಸ್ ಮೈತ್ರಿ ಸಂದರ್ಭದಲ್ಲಿ ಅಪಸ್ವರದ ಮಾತುಗಳಿಂದಲೇ ಅವರಿಗೆ ಸೋಲಾಗಿತ್ತು. ಅದೇ ಕೆಲಸವನ್ನು ನೀವು ಮಾಡಬೇಡಿ. ಮೈತ್ರಿ ಧರ್ಮಕ್ಕೆ ಸ್ವಲ್ಪ ಧಕ್ಕೆಯಾದರೂ ಸಹಿಸೋದಿಲ್ಲ ಎಂದ ಅವರು, ಲೋಕಸಭಾ ಚುನಾವಣೆಯಲ್ಲಿ ಕೇವಲ ಗೆಲುವು ಮುಖ್ಯವಲ್ಲ. ಲೀಡ್ ಕೂಡ ಹೆಚ್ಚು ಮುಖ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವರಾದ ಶ್ರೀರಾಮುಲು, ರಾಮದಾಸ್‌, ಎನ್‌. ಮಹೇಶ್‌, ಕೆ.ಜಿ. ಬೋಪಯ್ಯ, ಶಾಸಕ ಶ್ರೀವತ್ಸ, ಮಾಜಿ ಶಾಸಕರಾದ ಹರ್ಷವರ್ಧನ್, ಪ್ರೀತಂಗೌಡ, ಎಲ್‌. ನಾಗೇಂದ್ರ, ರಾಜೇಶ್ , ಮಾಜಿ ಸಚಿವ ನಾರಾಯಣಗೌಡ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ