Breaking News
Home / ರಾಜ್ಯ / ಇಂದು ರಾತ್ರಿಯಿಂದಲೇ ರಾಜ್ಯದ ನಾನಾ ಊರುಗಳಿಗೆ 1,000 ಹೆಚ್ಚುವರಿ ಕೆಎಸ್‍ಆರ್ಟಿಸಿ ಬಸ್ಗಳ ವ್ಯವಸ್ಥೆ

ಇಂದು ರಾತ್ರಿಯಿಂದಲೇ ರಾಜ್ಯದ ನಾನಾ ಊರುಗಳಿಗೆ 1,000 ಹೆಚ್ಚುವರಿ ಕೆಎಸ್‍ಆರ್ಟಿಸಿ ಬಸ್ಗಳ ವ್ಯವಸ್ಥೆ

Spread the love

ಬೆಂಗಳೂರು-ಕೋವಿಡ್ -19 ಆತಂಕದ ನಡುವೆಯೇ ಬೆಳಕಿನ ಹಬ್ಬ ದೀಪಾವಳಿ ಆಚರಣೆ ಮಾಡಲು ಸಾರ್ವಜನಿಕರು ಊರಿಗೆ ತೆರಳುವವರ ಅನುಕೂಲಕ್ಕೆ ಇಂದು ರಾತ್ರಿಯಿಂದಲೇ ರಾಜ್ಯದ ನಾನಾ ಊರುಗಳಿಗೆ 1,000 ಹೆಚ್ಚುವರಿ ಕೆಎಸ್‍ಆರ್ಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಇಂದು ರಾತ್ರಿ ಮತ್ತು ನಾಳೆ ರಾತ್ರಿ ಬೆಂಗಳೂರಿನಿಂದ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳು ಹಾಗೂ ಹೊರ ರಾಜ್ಯದ ವಿವಿಧ ಊರುಗಳಿಗೆ ಹೆಚ್ಚುವರಿಯಾಗಿ 1,000 ಕೆಎಸ್‍ಆರ್ಟಿಸಿ ಬಸ್ಗಳು ಸಂಚರಿಸಲಿವೆ.

ಹಾಗೇ, ನ. 16ರಂದು ದೀಪಾವಳಿ ಹಬ್ಬ ಮುಗಿಸಿಕೊಂಡು ಬೇರೆ ಊರುಗಳಿಂದ ಬೆಂಗಳೂರಿಗೆ ವಾಪಾಸ್ ಬರಲು ಹೆಚ್ಚುವರಿ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಎಸ್‍ಆರ್ಟಿಸಿ ತಿಳಿಸಿದೆ. ರಾತ್ರಿಯಿಂದ ಬೆಂಗಳೂರಿನಿಂದ ಬೇರೆ ಬೇರೆ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೂ ಕೆಎಸ್‍ಆರ್ಟಿಸಿ ಬಸ್ಗಳು ಸಂಚರಿಸಲಿವೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ