Breaking News

ಶಕ್ತಿ ಯೋಜನೆ ಕೆಲವೇ ತಿಂಗಳು ಅಷ್ಟೇ:ಅಮೃತ ದೇಸಾಯಿ,

Spread the love

ಕ್ತಿ ಯೋಜನೆ – ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಾರಿಯಾದ ಮೊದಲ ಗ್ಯಾರಂಟಿ ಯೋಜನೆ. ಆದರೆ ಈ ಯೋಜನೆ ಯಶಸ್ವಿಯಾಗಿದೆ ಅಂತಾ ಸರಕಾರವೇನೋ ಹೇಳುತ್ತೆ. ಆದರೆ ಅದನ್ನು ಮುಂದಿನ ಬಹಳ ತಿಂಗಳುಗಳವರೆಗೆ ತೆಗೆದುಕೊಂಡು ಹೋಗೋದೇ ಸವಾಲಾಗಿದೆ.
ಏಕೆಂದರೆ ಕೆಎಸ್ಸಾರ್ಟಿಸಿ ಹಲವಾರು ವರ್ಷಗಳಿಂದ ಹತ್ತಾರು ಸಮಸ್ಯೆಗಳಿಂದ ಕಂಗೆಟ್ಟುಹೋಗಿದೆ.ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಶುರುವಾದ ಶಕ್ತಿ ಯೋಜನೆಯಿಂದ ಮಹಿಳೆಯರ ಓಡಾಟದ ಸಂಖ್ಯೆ ಹೆಚ್ಚಾಗಿದೆ. ಆದರೆ ಈ ಯೋಜನೆಯಿಂದಾಗಿ ಸುರಕ್ಷತೆ, ಸಮಯೋಚಿತ ಸಂಚಾರ ವ್ಯವಸ್ಥೆ ಸಂಕುಚಿತಗೊಂಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳು ನಿಶಕ್ತಗೊಳ್ಳುತ್ತಿವೆ. ಅಗತ್ಯ ಸಿಬ್ಬಂದಿ, ವಾಹನಗಳ ಅಲಭ್ಯತೆಯಿಂದ ಅದೆಷ್ಟೋ ಹಳ್ಳಿಗಳಿಗೆ ಬಸ್ ಸಂಚಾರವೇ ನಿಂತು ಹೋಗಿದೆ. ಹೀಗೆ ಬಲ ಕಳೆದುಕೊಂಡ ಸಾರಿಗೆ ಸಂಸ್ಥೆಗಳಿಗೆ ಈಗ ಶಕ್ತಿ ಯೋಜನೆ ಅನುಷ್ಠಾನವೇ ಸವಾಲಾಗಿ ಪರಿಣಮಿಸಿದೆ.

ಶಕ್ತಿ ಯೋಜನೆ – ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಾರಿಯಾದ ಮೊದಲ ಗ್ಯಾರಂಟಿ ಯೋಜನೆ. ಆದರೆ ಈ ಯೋಜನೆ ಯಶಸ್ವಿಯಾಗಿದೆ ಅಂತಾ ಸರಕಾರವೇನೋ ಹೇಳುತ್ತೆ. ಆದರೆ ಅದನ್ನು ಮುಂದಿನ ಬಹಳ ತಿಂಗಳುಗಳವರೆಗೆ ತೆಗೆದುಕೊಂಡು ಹೋಗೋದೇ ಸವಾಲಾಗಿದೆ. ಏಕೆಂದರೆ ಕೆಎಸ್ಸಾರ್ಟಿಸಿ ಹಲವಾರು ವರ್ಷಗಳಿಂದ ಹತ್ತಾರು ಸಮಸ್ಯೆಗಳಿಂದ ಕಂಗೆಟ್ಟುಹೋಗಿದೆ.

ರಾಜ್ಯದಲ್ಲಿರೋ ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿ ಕಳೆದ 7 ವರ್ಷಗಳಿಂದ ಸಿಬ್ಬಂದಿ ನೇಮಕಾತಿಯೇ ನಡೆದಿಲ್ಲ. ಇನ್ನು ನಾಲ್ಕು ವರ್ಷಗಳಿಂದ ಬಿಎಂಟಿಸಿ ಕೆಲ ಬಸ್ ಖರೀದಿಸಿದ್ದು ಬಿಟ್ಟರೆ ಉಳಿದೆಡೆ ಒಂದೇ ಒಂದು ವಾಹನ ಖರೀದಿಸಿಲ್ಲ. ಆದರೆ, ಶಕ್ತಿ ಯೋಜನೆ ಅನುಷ್ಠಾನದ ನಂತರ ಪ್ರತಿದಿನ ಸಂಚರಿಸುವ ಪ್ರಯಾಣಿಕರ ಸಂಖ್ಯೆ 92 ಲಕ್ಷದಿಂದ 1.14 ಕೋಟಿ ದಾಟಿದೆ. ಹೀಗಾಗಿ ಇರುವ 23 ಸಾವಿರ ಬಸ್‌ಗಳಲ್ಲಿ ಪ್ರತಿ ದಿನ 500 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದು, ಡಕೋಟಾ ಬಸ್‌ಗಳು ಪ್ರಯಾಣಿಕರನ್ನು ಹೊತ್ತು ಸಾಗುತ್ತಿವೆ.

ಇದು ಜನರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಸಂಚಾರಕ್ಕೆ ಸಂಚಕಾರ ತಂದಿಟ್ಟಿದೆ. ಸಾಮರ್ಥ್ಯ ಮೀರಿ ಡಕೋಟಾ ಬಸ್‌ಗಳನ್ನು ಓಡಿಸುತ್ತಿರುವುದು ಸುರಕ್ಷಿತವೇ ಎಂಬ ಪ್ರಶ್ನೆ ಮೂಡಿದೆ. ಇನ್ನು ಶಾಲೆ ಆರಂಭ ಹಾಗೂ ಮುಕ್ತಾಯದ ಸಮಯದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ಹೆಚ್ಚುವರಿ ಬಸ್ ನೀಡಲು ವಾಹನಗಳೇ ಇಲ್ಲದ್ದರಿಂದ ದೊಡ್ಡಿಯಲ್ಲಿ ನಿಂತ ಕುರಿಗಳಂತೆ ಮಕ್ಕಳು, ವೃದ್ಧರು ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ ಎಂದು ಅಮೃತ ದೇಸಾಯಿ, ಮಾಜಿ ಶಾಸಕ ವಿಶ್ಲೇಷಿಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ