Breaking News

ಬಿಜೆಪಿ ಶಾಸಕಾಂಗ ಸಭೆ ಅಂತ್ಯ: ಸಭೆಯಲ್ಲಿ ಯಾವೆಲ್ಲಾ ನಿರ್ಧಾರ

Spread the love

ಬೆಂಗಳೂರು, (ಫೆಬ್ರವರಿ 12): ಇಂದಿನಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ (Karnataka Session) ಆರಂಭವಾಗಿದ್ದು, ಮೊದಲ ದಿನವೇ ವಿಪಕ್ಷ ಬಿಜೆಪಿ(BJP) ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಜೈ ಶ್ರೀರಾಮ್.. ಜೈ ಶ್ರೀರಾಮ್ ಅನ್ನೋ ಘೋಷಣೆಗಳನ್ನು ಕೂಗಿ ರಾಮನ ಜಪ ಮಾಡಿದೆ. ಇನ್ನು ನಾಳೆಯಿಂದ (ಫೆಬ್ರವರಿ 13) ಅಧಿವೇಶನದಲ್ಲಿ ಯಾವೆಲ್ಲಾ ವಿಷಯಗಳನ್ನ ಪ್ರಸ್ತಾಪಿಸಿ ಸರ್ಕಾರವನ್ನು ಕಟ್ಟಿಹಾಕಬೇಕೆಂದು ಬಿಜೆಪಿ ಇಂದು ಶಾಸಕಾಂಗ ಸಭೆ (Karnataka BJP legislative party meeting) ನಡೆಸಿದ್ದು, ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

ಶಾಸಕಾಂಗ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ಚುನಾವಣೆಯ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬೊಮ್ಮಾಯಿ. ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್ ಸೇರಿದಂತೆ ಇನ್ನುಳಿದ ಶಾಸಕರು ಹಾಜರಿದ್ದರು. ಆದ್ರೆ, ಸಭೆಗೆ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ.ಸೋಮಶೇಖರ್, ಅರೆಬೈಲ್ ಶಿವರಾಮ್ ಹೆಬ್ಬಾರ್, ರಮೇಶ್ ಜಾರಕಿಹೊಳಿ ಗೈರಾಗಿದ್ದಾರೆ.

ಮುಂದೆ ಲೋಕಸಭಾ ಚುನಾವಣೆ ಇರುವುದರಿಂದ ಈ ಅಧಿವೇಶನವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಲು ತೀರ್ಮಾನಿಸಿದ್ದು, ಸರ್ಕಾರದ ಲೋಷದೋಷಗಳನ್ನ ಸದನದಲ್ಲಿ ಚರ್ಚಿಸುವ ಮೂಲಕ ಜನರಿಗೆ ತಲುಪಿಸಲು ತೀರ್ಮಾನಿಸಿದೆ. ಇನ್ನು ಪಕ್ಷದಲ್ಲಿನ ಅಸಮಾಧಾನ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆಗಳು ನಡೆದಿವೆ. ಅದರಲ್ಲೂ ಮುಖ್ಯವಾಗಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಆರೋಪಿಸಿರುವ ಕಮಿಷನ್ ದಂಧೆ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.


Spread the love

About Laxminews 24x7

Check Also

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

Spread the loveತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ