Breaking News

ಕಾರ್ಖಾನೆಯಿಂದ ಬೆಳೆ ನಷ್ಟ: ಅಧಿಕಾರಿಗಳ ಪರಿಶೀಲನೆ

Spread the love

ಹಂದಿಗುಂದ: ‘ಗೋದಾವರಿ ಬಯೊರಿಫೈನರಿಸ್ ಸಕ್ಕರೆ ಕಾರ್ಖಾನೆಯಿಂದ ಹೊರಮ್ಮುವ ಬೂದಿ ಹಾಗೂ ಕಲುಷಿತ ನೀರಿನಿಂದ ಬೆಳಗಾವಿ ಜಿಲ್ಲೆಯ ಗಡಿ ಭಾಗದ ಹಳ್ಳಿಗಳಲ್ಲಿ ಬೆಳೆಗಳು ಹಾಳಾಗುತ್ತಿವೆ’ ಎಂದು ರೈತರು ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಿದ ದೂರು ಆಧರಿಸಿ ಮಂಗಳವಾರ, ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ಕಾರ್ಖಾನೆಯಿಂದ ಬೆಳೆ ನಷ್ಟ: ಅಧಿಕಾರಿಗಳ ಪರಿಶೀಲನೆ

 

ರಾಯಬಾಗ ತಾಲ್ಲೂಕಿನ ಮರಾಕುಡಿ ಹಾಗೂ ಕಪ್ಪಲಗುದ್ದಿ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ರೈತರು ಬೆಳೆದ ಬೆಳೆಗಳ ಮೇಲೆ ಬಿದ್ದಿರುವ ಕಾರ್ಖಾನೆಯ ಬೂದಿ ಹಾಗೂ ನೀರಿನ ಪರಿಶೀಲನೆ ನಡೆಸಿದರು.

ಈ ವೇಳೆ ರೈತರ ಸಂಘ ಸಂಚಾಲಕ ಶ್ರೀಶೈಲ ಅಂಗಡಿ ಮತ್ತು ಹಳ್ಳೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ ಕತ್ತಿ ಮಾತನಾಡಿ, ‘ಬೆಳೆಗಳು ಹಾನಿಯಾಗುತ್ತಿರುವ ಬಗ್ಗೆ ಬಾಲಕೋಟೆ ಹಾಗೂ ಬೆಳಗಾವಿ ಅಧಿಕಾರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ. ಈ ಹಿನ್ನೆಲೆಯಲ್ಲಿ ರೈತರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೋಗಿ ದೂರು ನೀಡಿದ್ದಾರೆ’ ಎಂದರು.


Spread the love

About Laxminews 24x7

Check Also

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

Spread the love ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ