Breaking News

ತವರು ಮನೆಯಿಂದ ಬಂದವಳೆ ಮಗುವನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ

Spread the love

) ರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿನ ತನ್ನ ಮನೆಯಲ್ಲಿಯೇ ಮುದ್ದು ಕಂದಮ್ಮನನ್ನ ಕೊಂದು ತಾನೂ ನೇಣಿಗೆ ಕೊರಳೊಡ್ಡಿದ್ದಾಳೆ.

ಕಲಬುರಗಿ,  ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಮರಪಳ್ಳಿ ಗ್ರಾಮದ ನಿವಾಸದಲ್ಲಿ ನಿನ್ನೆ(ಫೆ.13) ಸಂಜೆ ಎರಡು ವರ್ಷದ ಪುಟ್ಟ ಕಂದಮ್ಮಳನ್ನ ಕೊಂದು ತಾಯಿಯೂ ನೇಣಿಗೆ ಕೊರಳೊಡ್ಡಿರುವ ಧಾರುಣ ಘಟನೆ ನಡೆದಿದೆ. ತಾಯಿ ಶಿವಲೀಲಾ (23) ಹಾಗೂ ವರ್ಷಿತಾ(2) ಮೃತ ರ್ದುದೈವಿಗಳು.ಚಿಂಚೋಳಿತಾಲ್ಲೂಕಿನ ಕೆರೋಳ್ಳಿ ಗ್ರಾಮದ ನಿವಾಸಿಯಾಗಿರುವ ಶಿವಲೀಲಾ, ಮೂರು ವರ್ಷದ ಹಿಂದೆ ಮರಪಳ್ಳಿ ಗ್ರಾಮದ ಆನಂದ ಜೊತೆ ಮದುವೆ ಮಾಡಿಕೊಡಲಾಗಿತ್ತು. ಇಷ್ಟು ದಿನ ಇಬ್ಬರು ಚೆನ್ನಾಗಿಯೇ ಇದ್ದರು. ಅಲ್ಲದೆ ನಿನ್ನೆಯಷ್ಟೆ ತವರು ಮನೆಯಿಂದ ವಾಪಸ್ ಅಗಿದ್ದಳು‌. ಅಷ್ಟೇ ಸಂಜೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮಗುವನ್ನು ಕೊಂದು ತಾನೂ ನೇಣಿಗೆ ಶರಣಾಗಿದ್ದಾಳೆ. ತಾಯಿ ಮಗಳ ಸಾವನ್ನ ಕಂಡು ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಕಲಬುರಗಿ: ತವರು ಮನೆಯಿಂದ ಬಂದವಳೆ ಮಗುವನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ

ಇನ್ನು ಮೊದ ಮೊದಲು ಗಂಡ ಅತ್ತೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರಬುಹುದು ಎನ್ನುವ ಶಂಕೆ ವ್ಯಕ್ತವಾಗಿತ್ತು. ಆದ್ರೆ, ಸದ್ಯ ಮೃತಳ ಸಂಬಂಧಿಕರೇ ‘ಶಿವಲೀಲಾ ಸ್ವಲ್ಪ ಮುಂಗೊಪಿಯಾಗಿದ್ದಳು. ಅಲ್ಲದೇ ಆಕೆ ಯಾಕೆ ಸಾವನ್ನಪ್ಪಿದ್ದಾಳೆ ಎನ್ನುವ ನಿಖರ ಕಾರಣ ಗೊತ್ತಿಲ್ಲ ಎನ್ನುತ್ತಿದ್ದಾರೆ. ಹೆಂಡತಿಯನ್ನ ಕರೆದುಕೊಂಡು ಬರುವುದಕ್ಕೆ ಹೋಗಿದ್ದ ಗಂಡ ಆನಂದ ದೇಸಾಯಿ ಕೂಡ ಹೆಂಡತಿ ಮನೆಯಲ್ಲಿಯೇ ಎರಡ್ಮೂರು ದಿನ ಇದ್ದನಂತೆ. ನಿನ್ನೆಯಷ್ಟೆ ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಬಂದಿದ್ದ. ಆದ್ರೆ, ಇದ್ದಕ್ಕಿಂತದ್ದೇ ಶಿವಲೀಲಾ ಇಂತಹ ನಿರ್ಧಾರಕ್ಕೆ ಬಂದಿದ್ದು ಯಾಕೆ ಎನ್ನುವ ಹತ್ತಾರು ಪ್ರಶ್ನೆ ಮೂಡುತ್ತಿವೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

Spread the love ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ