Breaking News

ಮುಸ್ಲಿಮರಿಗೆ ಹೆಚ್ಚು ಅನುದಾನ ಕೊಟ್ರೆ ತಪ್ಪೇನು ಎಂದ ಪರಮೇಶ್ವರ: ಯತ್ನಾಳ ಆಕ್ರೋಶ

Spread the love

ವಿಜಯಪುರ: ಮುಸ್ಲಿಮರಿಗೆ ಸ್ವಲ್ಪ ಹೆಚ್ಚು ಅನುದಾನ ಕೊಟ್ಟರೆ ತಪ್ಪೇನು ಎಂದು ಗೃಹ ಸಚಿವ ಡಾ. ಪರಮೇಶ್ವರ ನೀಡಿರುವ ಹೇಳಿಕೆಯನ್ನು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಯತ್ನಾಳ, ಡಾ.ಪರಮೇಶ್ವರ್ ಅವರೇ, ಸರ್ವ ಧರ್ಮ ಸಹಿಷ್ಣುತೆ, ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷಣೆಗಳು ನಿಮ್ಮ ಭಾಷಣಕ್ಕೆ ಸೀಮಿತವಾಯಿತೇ?

ತೆರಿಗೆ ದಾರರ ಹಣವನ್ನು equitable ಆಗಿ ಹಂಚಬೇಕಾಗಿದ್ದು ಸರ್ಕಾರದ ಹೊಣೆ. ಮುಸಲ್ಮಾನರಿಗೆ ಹೆಚ್ಚು, ಹಿಂದೂಗಳಿಗೆ ಕಡಿಮೆ ಈ ರೀತಿಯಾದ ತಾರತಮ್ಯವೇಕೆ ? ಸಂದರ್ಭಕ್ಕನುಗುಣವಾಗಿ ಮಾತನಾಡುವ ನೀವು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಡೆದುಕೊಳ್ಳುತ್ತಿದ್ದೀರಾ ಎಂಬುದನ್ನು ಪರಾಮರ್ಶಿಸಿ ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ