ಕಲಬುರಗಿ, ಫೆ.18: ಕೃಷಿ ಪರಿಕರಗಳನ್ನು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡ್ರಾಮಿ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನುಅಮಾನತುಮಾಡಿ ಕಲಬುರಗಿ(Kalaburagi) ಜಂಟಿ ಕೃಷಿ ನಿರ್ದೇಶಕರು ಆದೇಶಿಸಿದ್ದಾರೆ. ಇದೇ ಫೆಬ್ರವರಿ 5 ರಂದು ಟ್ಯ್ಯಾಕ್ಟರ್ನಲ್ಲಿ 100 ಎರೆಹುಳು ಗೊಬ್ಬರದ ಚೀಲಗಳು, 30 ಪಿವಿಸಿ ಪೈಪ್ಗಳನ್ನ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಗ್ರಾಮದ ಜನರೆಲ್ಲ ಸೇರಿ ಟ್ಯ್ಯಾಕ್ಟರ್ನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಅಕ್ರಮವೆಸಗಿದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಮೈಸೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು
ಮೈಸೂರು:ಮೈಸೂರು ಮಿನಿ ವಿಧಾನಸೌಧದ ಹಿಂಭಾಗದ ಅನಧಿಕೃತ ಕಟ್ಟಡಗಳ ತೆರವಿಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಅವರು ಆದೇಶಿಸಿದ್ದಾರೆ. ತಹಶೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಜೆಸಿಬಿಗಳ ಮೂಲಕ ಅಕ್ರಮ ಕಟ್ಟಡ ತೆರವು ಮಾಡಲಾಗುತ್ತಿದೆ. ಈ ವೇಳೆ ಕೆಲವರಿಂದ ವಿರೋಧ ನೋಟಿಸ್ ನೀಡಿಲ್ಲವೆಂದು ಕ್ಯಾತೆ ತೆಗೆದಿದ್ದು, ಯಾವುದಕ್ಕೂ ಕೇರ್ ಮಾಡದೆ ಅನಧಿಕೃತ ಕಟ್ಟಡ ನೆಲಸಮ ಮಾಡಲಾಗುತ್ತಿದೆ. ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ವಹಿಸಲಾಗಿದೆ.