Breaking News

13,000 ಕೋಟಿ ವೆಚ್ಚದ 36 ರಾಷ್ಟ್ರೀಯ ಹೆದ್ದಾರಿ ಯೋಜನೆ ಉದ್ಘಾಟಿಸಿದ ಗಡ್ಕರಿ

Spread the love

ಬೆಳಗಾವಿ: ‘ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಗ್ರೀನ್‌ ಕಾರಿಡಾರ್‌ ನಿರ್ಮಿಸುವುದು ನಮ್ಮ ಆದ್ಯತೆ. ಇಂಥ ಹೆದ್ದಾರಿಗಳು ಪ್ರಯಾಣದ ಸಮಯ, ವೆಚ್ಚ ಕಡಿಮೆ ಆಗುವುದಲ್ಲದೇ ಅಭಿವೃದ್ಧಿಗೆ ಪೂರಕವಾಗಿವೆ’ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.

 

ನಗರದಲ್ಲಿ ಗುರುವಾರ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಉದ್ಘಾಟನೆ ಹಾಗೂ 18 ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಕರ್ನಾಟಕ ರಾಜ್ಯ ಅತ್ಯಂತ ಸಂಪದ್ಭರಿತವಾಗಿದೆ. ಹೀಗಾಗಿ, ಕೇಂದ್ರವು ಇಲ್ಲಿನ ರಾಷ್ಟ್ರೀಯ ಹೆದ್ದಾರಿಗಳಿಗೆ ಹೆಚ್ಚು ಆದ್ಯತೆ ನೀಡಿದೆ. ರಾಜ್ಯದಲ್ಲಿ 8,200 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಇದೆ. ಇದನ್ನು ₹3 ಲಕ್ಷ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಶೇ 90ರಷ್ಟು ಕಾಮಗಾರಿಗಳು ಮುಗಿದಿವೆ’ ಎಂದರು.

₹13,000 ಕೋಟಿ ವೆಚ್ಚದ 36 ರಾಷ್ಟ್ರೀಯ ಹೆದ್ದಾರಿ ಯೋಜನೆ ಉದ್ಘಾಟಿಸಿದ ಗಡ್ಕರಿ

ಬೆಳಗಾವಿ- ಹುನಗುಂದ- ರಾಯಚೂರು ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುತ್ತಿದೆ. ಇದರ ಅಂದಾಜು ವೆಚ್ಚವೇ ₹9,000 ಕೋಟಿ. ಈ ಕಾಮಹಾರಿ ಪೂರ್ಣಗೊಂಡರೆ ಬೆಳಗಾವಿ- ರಾಯಚೂರು ಮಧ್ಯದ ಪ್ರಯಾಣದ ಅವಧಿ ಮೂರೂವರೆ ತಾಸು ಕಡಿಮೆ ಆಗಲಿದೆ’ ಎಂದರು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ