Breaking News

ಪರಿಶಿಷ್ಟರ ಅನುದಾನ ಅನ್ಯಕಾರ್ಯಕ್ಕೆ ಬಳಸಬೇಡಿ: ದಸಂಸ

Spread the love

ಚಿಕ್ಕೋಡಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪಟ್ಟಣದ ಬಸವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಕೆಲಸಗಳಿಗೆ ಬಳಸಬಾರದು. ಪರಿಶಿಷ್ಟರಿಗೆ ನೀಡಿದ ಜಮೀನನ್ನು ಪರಭಾರೆ ಮಾಡಬಾರದು.

ಪರಿಶಿಷ್ಟರ ಅನುದಾನ ಅನ್ಯಕಾರ್ಯಕ್ಕೆ ಬಳಸಬೇಡಿ: ದಸಂಸ

ದೌರ್ಜನ್ಯ ತಡೆಗೆ ಪ್ರತಿಯಾಗಿ ಪ್ರಕರಣ ದಾಖಲಿಸಬಾರದು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಉಪ ವಿಭಾಗಾಧಿಕಾರಿ ಮಹೆಬೂಬಿ ಅವರಿಗೆ ಸಲ್ಲಿಸಿದರು.

ಬಸವ ವೃತ್ತದ ಬಳಿಯಲ್ಲಿ ಕೆಲ ಕಾಲ ನಿಪ್ಪಾಣಿ- ಮುಧೋಳ ಹಾಗೂ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಮುತ್ತಣ್ಣ ರಾಯಣ್ಣವರ, ಕಲ್ಲಪ್ಪ ರಾಮಚನ್ನವರ, ರವಿ ಬಸ್ತವಾಡಕರ, ಸವಿತಾ ಅಸೋಧೆ ನೇತೃತ್ವ ವಹಿಸಿದ್ದರು.


Spread the love

About Laxminews 24x7

Check Also

ಅಕ್ರಮ ಬೆಟ್ಟಿಂಗ್​​ ಪ್ರಕರಣ: ಶಾಸಕ ಕೆ. ಸಿ. ವೀರೇಂದ್ರ ಇ.ಡಿ. ಕಸ್ಟಡಿ ಅವಧಿ ಸೆ.8ರ ವರೆಗೆ ವಿಸ್ತರಣೆ

Spread the loveಬೆಂಗಳೂರು: ಆನ್​ಲೈನ್ ಹಾಗೂ ಆಫ್​ಲೈನ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ನಡೆಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ