Breaking News

ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ, ಚಿಂಗಳೆ ಹೆಸರು ಸೂಚನೆ

Spread the love

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಿಯಾಂಕಾ ಜಾರಕಿಹೊಳಿ ಅಥವಾ ಲಕ್ಷ್ಮಣರಾವ್‌ ಚಿಂಗಳೆ ಅವರಿಗೆ ಟಿಕೆಟ್‌ ನೀಡುವಂತೆ, ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಜಿಲ್ಲೆಯ ನಾಯಕರ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

 

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದಲ್ಲಿ ರಾತ್ರಿ ಚಿಕ್ಕೋಡಿ ಲೋಕಸಭೆ ಟಿಕೆಟ್‌ಗೆ ಸಂಬಂಧಿಸಿದ ಎರಡನೇ ಸಭೆ ನಡೆಯಿತು. ಸಭೆಯಲ್ಲಿ ಚರ್ಚೆ ಮಾಡಿದ ಸಚಿವರು, ಶಾಸಕರು ಹಾಗೂ ನಾಯಕರು ಕೊನೆಗೆ ಇಬ್ಬರ ಹೆಸರನ್ನು ಅಂತಿಮಗೊಳಿಸಿದರು. ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಅಥವಾ ಕಾಂಗ್ರೆಸ್‌ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ, ಕುರುಬ ಸಮಾಜದ ಮುಖಂಡ ಲಕ್ಷ್ಮಣರಾವ್‌ ಚಿಂಗಳೆ ಅವರಿಗೆ ಟಿಕೆಟ್‌ ನೀಡುವಂತೆ ಹೈಕಮಾಂಡ್‌ಗೆ ಪಟ್ಟಿ ಕಳುಹಿಸಲು ನಿರ್ಧರಿಸಲಾಯಿತು. ಸ್ವತಃ ಪ್ರಿಯಾಂಕಾ ಹಾಗೂ ಚಿಂಗಳೆ ಕೂಡ ಈ ಸಭೆಯಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.

ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ, ಚಿಂಗಳೆ ಹೆಸರು ಸೂಚನೆ

‘ಚಿಕ್ಕೋಡಿಯಲ್ಲಿ ಗೆಲ್ಲಲೇಬೇಕಾದ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕಿದೆ. ಅಭ್ಯರ್ಥಿಯು ಎಲ್ಲ ಸಮುದಾಯದವರೂ ಒಪ್ಪುವಂತೆ ಇರಬೇಕು, ಆರ್ಥಿಕವಾಗಿಯೂ ಪ್ರಬಲ ಆಗಿರಬೇಕು. ಶಾಸಕರಿಂದ ವಿರೋಧ ವ್ಯಕ್ತವಾಗುವಂತೆ ಇರಬಾರದೆಂದು ಚರ್ಚೆ ನಡೆಯಿತು. ಅರ್ಜಿ ಸಲ್ಲಿಸಿದ ಆರು ಹೆಸರುಗಳ ಬಗ್ಗೆಯೂ ಚರ್ಚೆ ನಡೆಯಿತು. ಆದರೆ, ಬಹಳಷ್ಟು ಜನ ಪ್ರಿಯಾಂಕಾ ಅಥವಾ ಚಿಂಗಳೆ ಅವರ ಹೆಸರಿಗೇ ಒಪ್ಪಿಗೆ ನೀಡಿದರು’ ಎಂದು ಮೂಲಗಳು ಖಚಿತಪಡಿಸಿವೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ