Breaking News
Home / ರಾಜಕೀಯ / ಬಸ್ ನಿಲ್ದಾಣದಲ್ಲಿ ಕಳ್ಳತನ: ಮೂವರು ಕಳ್ಳಿಯರ ಬಂಧನ

ಬಸ್ ನಿಲ್ದಾಣದಲ್ಲಿ ಕಳ್ಳತನ: ಮೂವರು ಕಳ್ಳಿಯರ ಬಂಧನ

Spread the love

ವಿಜಯಪುರ: ನಗರದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಣ ಆಭರಣ ಕಳ್ಳತನ ಪ್ರಕರಣದಲ್ಲಿ ನಗರದ ಪೊಲೀಸರು ಕಲಬುರಗಿ ಮೂಲದ ಮೂವರು ಅಂತರ ಜಿಲ್ಲಾ ಕಳ್ಳಿಯರನ್ನು ಬಂಧಿಸಿ, 8.70 ಲಕ್ಷ ರೂ. ಮೌಲ್ಯದ 146 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

 

ಕಳ್ಳತನ ಆರೋಪದಲ್ಲಿ ಬಂಧಿತರನ್ನು ಕಲಬುರಗಿ ನಗರದ ಬಾಪು ನಗರ ನಿವಾಸಿಗಳಾದ 56 ವರ್ಷದ ಗಂಗೂಬಾಯಿ ನಾರಾಯಣ ಕಾಳೆ, 44 ವರ್ಷದ ನರಸಮ್ಮ ಅಮಿತ ಕುಮಾರ ಪಾಟೀಲ ಹಾಗೂ 35 ವರ್ಷದ ಕರಿಷ್ಮಾ ಸಹದೇವ ಉಪಾದ್ಯೆ ಎಂದು ಗುರುತಿಸಲಾಗಿದೆ.

ಬಂಧಿತರು ನಗರದ ಕೇಂದ್ರ ಬಸ್ ನಿಲ್ದಾಣ ಹಾಗೂ ಸೆಟ್ ಲೈಟ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಆಭರಣಗಳನ್ನು ಕಳ್ಳತನ ಮಾಡುತ್ತಿದ್ದರು.

Vijayapura; ಬಸ್ ನಿಲ್ದಾಣದಲ್ಲಿ ಕಳ್ಳತನ: ಮೂವರು ಕಳ್ಳಿಯರ ಬಂಧನ

ಈ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಎಸ್ಪಿ ಋಷಿಕೇಶ ಭಗವಾನ್ ಅವರು ಗಾಂಧಿಚೌಕ್ ಸಿಪಿಐ ಮಹಾಂತೇಶ ದ್ಯಾಮಣ್ಣವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.

ಪೊಲೀಸರ ತನಿಖಾ ತಂಡ ಅಂತರ ಜಿಲ್ಲಾ ಮೂವರು ಕಳ್ಳಿಯರನ್ನು ಬಂಧಿಸಿ, 8.70 ಲಕ್ಷ ರೂ. ಮೌಲ್ಯದ 146 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೂವರು ಬಂಧಿತರು ನಡೆಸಿದ ನಾಲ್ಕು ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿರುವ ತನಿಖಾ ತಂಡಕ್ಕೆ ಎಸ್ಪಿ ಋಷಿಕೇಶ ಭಗವಾನ್ ಬಹುಮಾನ ಘೋಷಿಸಿದ್ದಾರೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ