Breaking News

ಸಂವಿಧಾನಕ್ಕೆ ಅಪಾಯವಾದರೆ ನಮ್ಮೆಲ್ಲರ ನಾಶ – ಸಿಎಂ

Spread the love

ಬೆಂಗಳೂರು : ಸಂವಿಧಾನಕ್ಕೆ (Constitution) ಅಪಾಯ ಒದಗುವುದನ್ನು ನಾವು ಯಾರೂ ಸಹಿಸಿಕೊಳ್ಳಬಾರದು. ಸಂವಿಧಾನ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ. ಆದರೆ ಸಂವಿಧಾನಕ್ಕೆ ಧಕ್ಕೆ ಒದಗಿದರೆ ನಾವು ನಾಶವಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಶನಿವಾರ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ದಿನವನ್ನು (Constitution and National Unity Convention 2024) ಉದ್ಘಾಟಿಸಿ ಮಾತನಾಡಿದ ಅವರು, ಸಮಾನತೆ, ಸ್ವಾತಂತ್ರ್ಯ. ಭ್ರಾತೃತ್ವ ಮೂರು ಸಂವಿಧಾನದ ಮುಖ್ಯ ಅಂಶಗಳಾಗಿವೆ. ಇದನ್ನು ಒಪ್ಪದವರು ಸಂವಿಧಾನದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದರು.

ಜಗತ್ತಿನ ಅನೇಕ ದೇಶಗಳ ಸಂವಿಧಾನವನ್ನು ಓದಿ ಅದರಲ್ಲಿರುವ ಒಳ್ಳೆಯ ಅಂಶಗಳನ್ನು ಪರಿಗಣಿಸಿ ನಮ್ಮ ಸಂವಿಧಾನವನ್ನು ರಚಿಸಲಾಗಿದೆ. ನಮ್ಮ ದೇಶದ ಜನರ ರಾಜಕೀಯ, ಆರ್ಥಿಕ, ಸಾಮಾಜಿಕ ಅಭಿವೃದ್ಧಿಗಳನ್ನು ಗಮನದಲ್ಲಿರಿಸಿಕೊಂಡು ಸಂವಿಧಾನವನ್ನು ಡಾ. ಬಿ.ಆರ್‌ .ಅಂಬೇಡ್ಕರ್‌ ರಚಿಸಿದರು ಎಂದು ಸಿಎಂ ಹೇಳಿದರು.

National Unity Convention 2024 :  ಸಂವಿಧಾನಕ್ಕೆ ಅಪಾಯವಾದರೆ ನಮ್ಮೆಲ್ಲರ ನಾಶ - ಸಿಎಂ ಸಿದ್ದರಾಮಯ್ಯ

ಈ ದೇಶದಲ್ಲಿ ಎರಡು ಅಪಪ್ರಚಾರ ನಡೆಯುತ್ತಿದೆ. ಕೇವಲ ದಲಿತರ ಉದ್ದಾರಕ್ಕಾಗಿ ಸಂವಿಧಾನ ರಚನೆಯಾಗಿದೆ. ಹಾಗೂ ನಮ್ಮ ಪರಂಪರೆಗೆ ಸಂವಿಧಾನ ಅನುಗುಣವಾಗಿಲ್ಲ ಎಂಬುದು ಎರಡು ಮುಖ್ಯ ಆರೋಪಗಳಾಗಿವೆ ಎಂದು ನುಡಿದ ಸಿಎಂ ಸಿದ್ದರಾಮಯ್ಯ, ಜಾತಿಯ ಕಾರಣದಿಂದ ಉಂಟಾಗಿರುವ ಸಮಾಜದಲ್ಲಿ ರಾಜಕೀಯ ಅಸಮಾನತೆ, ಸಾಮಾಜಿಕ ಅಸಮಾನತೆ, ಆರ್ಥಿಕ ಅಸಮಾನತೆ ಉಂಟಾಗಿದೆ. ಈ ಅಸಮಾನತೆಯನ್ನು ಹೋಗಲಾಡಿಸಲು ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಸಂವಿಧಾನದಿಂದ ಮಾತ್ರ ಸಾಧ್ಯ ಎಂದರು.

 


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ