Breaking News

ಜೈಲಿಗೆ ಹಾಕಿದರೆ ರಾಜ್ಯ ಉರಿದೀತು: ನಾರಾಯಣ ಗೌಡಎಚ್ಚರಿಕೆ

Spread the love

ಬೆಳಗಾವಿ: ನಮ್ಮ ಮೇಲೆ ಮೊಕದ್ದಮೆ ಹಾಕಿ ಜೈಲಿಗೆ ಕಳುಹಿಸುವ ಪ್ರಯತ್ನವನ್ನು ಸರಕಾರ ಮಾಡಿದರೆ ಇಡೀ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಎಚ್ಚರಿಕೆ ನೀಡಿದರು.

ನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಕ್ಷಣ ವೇದಿಕೆಯ ರಾಜ್ಯ ಕಾರ್ಯಕಾರಿಣಿ ಸಭೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೈಲಿಗೆ ಹಾಕಿದರೆ ರಾಜ್ಯ ಉರಿದೀತು: ನಾರಾಯಣ ಗೌಡ

ನಮ್ಮವರೇ ನಮ್ಮ ಧ್ವನಿ ಅಡಗಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ಈಗಿನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಅಷ್ಟೇ ನಮ್ಮನ್ನು ಜೈಲಿಗೆ ಕಳುಹಿಸಿಲ್ಲ. ಎಸ್‌.ಎಂ. ಕೃಷ್ಣ, ದೇವೇಗೌಡ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ನಮ್ಮನ್ನು ಜೈಲಿಗೆ ಕಳುಹಿಸಿದ್ದಾರೆ. ನಾವು ಯಾವತ್ತೂ ಜೈಲಿಗೆ ಹೆದರಿ ಕುಳಿತವರಲ್ಲ. ಡಿ.27ರ ಹೋರಾಟವನ್ನು ಇಡೀ ಕನ್ನಡಿಗರು ಮೆಚ್ಚಿಕೊಂಡಿದ್ದಾರೆ ಎಂದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ