ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (DCM D K Shivakumar) ಅವರನ್ನು ಶಾಸಕ ಜನಾರ್ಧನ ರೆಡ್ಡಿ (Gali Janardhan reddy) ಭೇಟಿಯಾಗಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ (Rajyasabha election) ಕಾಂಗ್ರೆಸ್ (Congress) ಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyan rajya pragati party) ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆಯೆನ್ನಲಾಗಿದೆ.
ಫೆ. 27 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸುವಂತೆ ಕಾಂಗ್ರೆಸ್ ಪಕ್ಷವು ಎರಡು ದಿನಗಳ ಹಿಂದಷ್ಟೇ ಜನಾರ್ಧನ ರೆಡ್ಡಿಯವರನ್ನು ಸಂಪರ್ಕಿಸಿತ್ತು. ನಮ್ಮಲ್ಲಿ ಜನಾರ್ಧನ ರೆಡ್ಡಿ ಸೇರಿದಂತೆ 139 ಶಾಸಕರಿದ್ದಾರೆ ಎಂದು ಡಿಕೆಶಿ ಹೇಳಿಕೆ ನೀಡಿದ್ದರು.
ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಐವರು ಅಭರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಜಯ್ ಮಾಕನ್, ಸೈಯದ್ ನಾಸಿರ್ ಹುಸೇನ್, ಜಿಸಿ ಚಂದ್ರಶೇಖರ್ , ಬಿಜೆಪಿಯಿಂದ ನಾರಾಯಣ ಭಾಂಡಗೆ ಮತ್ತು ಜೆಡಿಎಸ್ ಪಕ್ಷದಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.