Breaking News
Home / Uncategorized / ವಾಕಿಂಗ್ ಹೋದವರ ಮೇಲೆ ಕರಡಿ ದಾಳಿ.

ವಾಕಿಂಗ್ ಹೋದವರ ಮೇಲೆ ಕರಡಿ ದಾಳಿ.

Spread the love

ಶಿವಮೊಗ್ಗ: ಚಿರತೆ, ಕಾಡಾನೆ ಕಾಡು ಬಿಟ್ಟು ನಾಡಿನತ್ತ ಹೆಜ್ಜೆ ಹಾಕುತ್ತಿರುವುದು ಹೊಸತೇನು ಅಲ್ಲ ಆದರೆ ಈ ಬಾರಿ ಕರಡಿಯೊಂದು ನಗರ ಪ್ರದೇಶದಲ್ಲಿ ಕಂಡು ಬಂದಿದ್ದು ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗುವವರ ಮೇಲೆ ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

 

ಘಟನೆಯಲ್ಲಿ ತುಕಾರಂ ಶೆಟ್ಟಿ ಎಂಬುವವರ ಹೊಟ್ಟೆಯ ಭಾಗಕ್ಕೆ ತರಚಿದ ಗಾಯಗಳಾಗಿವೆ.

ಸೋಮವಾರ ಬೆಳಗ್ಗೆ ತುಕಾರಾಂ ಶೆಟ್ಟಿ ಅವರು ವಾಕಿಂಗ್ ಹೋದ ವೇಳೆ ಕರಡಿಯನ್ನು ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ ಈ ವೇಳೆ ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಿ ಬಂದ ಕರಡಿ ತುಕಾರಾಂ ಅವರ ಮೇಲೆ ದಾಳಿ ನಡೆಸಿ ಪರಾರಿಯಾಗಿದೆ.

Bear: ಶಿವಮೊಗ್ಗ ನಗರದಲ್ಲಿ ಬೆಳ್ಳಂಬೆಳಗ್ಗೆ ವಾಕಿಂಗ್ ಹೋದವರ ಮೇಲೆ ಕರಡಿ ದಾಳಿ.

ಘಟನೆ ನಡೆದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದು ಕರಡಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಗೋಪಾಲಗೌಡ ಬಡಾವಣೆಯ ಎಫ್‌ ಬ್ಲಾಕ್‌ನಲ್ಲಿರವ ಡಿವಿಜಿ ಪಾರ್ಕ್‌ ಸಮೀಪ ಕರಡಿ ಪ್ರತ್ಯಕ್ಷವಾಗಿದ್ದು ಇದೀಗ ಅಲ್ಲಿನ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.


Spread the love

About Laxminews 24x7

Check Also

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ

Spread the love ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ