Breaking News

ಡಿ.1ರಂದು ರಾಜ್ಯಸಭೆಯ ಒಂದು ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

Spread the love

ಬೆಂಗಳೂರು: ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಡಿ.1ರಂದು ರಾಜ್ಯಸಭೆಯ ಒಂದು ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡರೂ ಸಹ ಕಾಂಗ್ರೆಸ್ ಗೆಲ್ಲಲು ಸಾಧ್ಯವಿಲ್ಲ. ಸಂಖ್ಯಾಬಲದಲ್ಲಿ ಬಿಜೆಪಿ ಸ್ಥಾನಗಳನ್ನು ಹೊಂದಿದೆ. ರಾಜ್ಯಸಭೆಗೆ ಹಾಕುವ ಮತವನ್ನು ಪಕ್ಷದ ವೀಕ್ಷಕರಿಗೆ ತೋರಿಸಬೇಕಿರುವುದರಿಂದ ಅಡ್ಡಮತದಾನ ಮಾಡಿಸುವುದು ಬಹಳ ಕಷ್ಟ. ಆಡಳಿತಾರೂಢ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸುವುದು ಕಷ್ಟವಾಗಿರುವುದರಿಂದ ಕಾಂಗ್ರೆಸ್ ಅನಗತ್ಯವಾಗಿ ಕ್ರಮ ತೆಗೆದುಕೊಳ್ಳದೇ ಇರಲು ನಿರ್ಧರಿಸಿದೆ.

ಜೆಡಿಎಸ್ ಕೂಡ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದ್ದು, ಬಿಜೆಪಿ ಅಭ್ಯರ್ಥಿ ಸುಲಭವಾಗಿ ಅವಿರೋಧ ಆಯ್ಕೆಯಾಗುವ ನಿರೀಕ್ಷೆಗಳಿವೆ. ಪ್ರತಿಪಕ್ಷಗಳ ಸ್ಪರ್ಧೆ ಇಲ್ಲದೇ ಇರುವುದರಿಂದ ಚುನಾವಣೆ ನಡೆಯದೇ ಇರುವ ಸಾಧ್ಯತೆ ಇದೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ