Breaking News

ಉಡುಪಿಯಲ್ಲಿ ಸೌಂಡ್ ಮಾಡ್ತಿದೆ ಬಿದಿರು ಪಟಾಕಿ

Spread the love

ಉಡುಪಿ: ಕೊರೊನಾ ಕರಾಳತೆಯಿಂದ ಹೊರಬಂದು ದೀಪಾವಳಿಗೆ ಪಟಾಕಿ ಸಿಡಿಸೋಣ ಅಂತ ಜನ ಹಾಕಿದ್ದ ಲೆಕ್ಕಾಚಾರ ಉಲ್ಟಾ ಆಗಿದೆ. ರಾಜ್ಯ ಸರ್ಕಾರ ರಾಸಾಯನಿಕ ಪಟಾಕಿ ನಿಷೇಧ ಮಾಡಿ, ದುಷ್ಪರಿಣಾಮ ರಹಿತ ಪಟಾಕಿಗೆ ಮಣೆ ಹಾಕಿದೆ. ನಿಮ್ಮ ಪಟಾಕಿ ರಗಳೆಯೇ ಬೇಡ ಅಂತ ಉಡುಪಿಯ ಪರ್ಕಳ ಫ್ರೆಂಡ್ಸ್ ತಾವೇ ಪಟಾಕಿ ತಯಾರು ಮಾಡಲು ಮುಂದಾಗಿದ್ದಾರೆ.

ಭೂಮಿ ಅದುರಿ ಬಾನು ಬಿರಿಯುವ ಪಟಾಕಿಗೆ ಈ ಬಾರಿ ಕೊರೊನಾ ಬ್ರೇಕ್ ಹಾಕಿದೆ. ಕಣ್ಣು ಬಿಡಲಾಗದ, ದಟ್ಟ ಹೊಗೆಯಿಂದ ಸುತ್ತಲ ಪರಿಸರ ನಾಶ ಮಾಡುವ ಪಟಾಕಿಯನ್ನು ಸಿಎಂ ಯಡಿಯೂರಪ್ಪ ಬ್ಯಾನ್ ಮಾಡಿದ್ದಾರೆ. ತಮಿಳ್ನಾಡು ಪಟಾಕಿಯೂ ಬೇಡ, ಹಸಿರು ಪಟಾಕಿಯೂ ಬೇಡ ಅಂತ ಉಡುಪಿಯ ಪರ್ಕಳ ಫ್ರೆಂಡ್ಸ್ ಬಿದಿರು ಪಟಾಕಿ ತಯಾರಿಸಿದ್ದಾರೆ.

ಪಕ್ಕದ ಖಾಲಿ ಜಮೀನಿನಲ್ಲಿದ್ದ ಬಿದಿರು ಕಡಿದು ಶುಚಿ ಮಾಡಿದ್ದಾರೆ. ಏಳು ಗಂಟು ಇರುವ ಒಂದು ತುಂಡು ಬಿದಿರು. ಬುಡದ ಒಂದು ಗಂಟು ಬಿಟ್ಟು ಒಂದು ಬದಿಯಲ್ಲಿ ರಂಧ್ರ ಕೊರೆಯಬೇಕು. ಬಿದಿರು ಕೋಲಿನ ಎಲ್ಲಾ ಗಂಟುಗಳನ್ನು ಬಿಡಿಸಿದರೆ ಬಿದಿರು ಪಟಾಕಿ ಅರ್ಧ ರೆಡಿ.

ಬಿದಿರನ್ನು ಅಡ್ಡ ಮಲಗಿಸಿ ರಂಧ್ರಕ್ಕೆ ಸ್ವಲ್ಪ ಸೀಮೆ ಎಣ್ಣೆ ಸುರಿದು, ಸೈಕಲ್ ಪಂಪ್ ನಲ್ಲಿ ಅದೇ ರಂಧ್ರಕ್ಕೆ ಗಾಳಿ ಹಾಕಿ, ಅದೇ ರಂಧ್ರದ ಮೇಲೆ ಬೆಂಕಿ ಸೋಕಿಸಿದರೆ ಸಾಕು ಢಂ..! ಎಂಬ ಶಬ್ದ ಬರುತ್ತದೆ. ಹೊಗೆಯಿಲ್ಲ, ರಾಶಿ ಕಸ ಇಲ್ಲ. ನಯಾ ಪೈಸೆ ಖರ್ಚಿಲ್ಲ. ಮತ್ತೆ ಎರಡು ಚಮಚ ಸೀಮೆಯೆಣ್ಣೆ ತುಂಬಿಸಿ ಗಾಳಿ ಹಾಕಿ ಬೆಂಕಿಯಿಟ್ಟರೆ ದಡಂ ಎಂಬ ಸದ್ದು. ಇದು ದೇಸಿ ಪಟಾಕಿ.


Spread the love

About Laxminews 24x7

Check Also

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Spread the loveರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ