Breaking News

ಮುಖ ಜಜ್ಜಿ ಅಪರಿಚಿತ ಮಹಿಳೆಯ ಕೊಲೆ

Spread the love

ಬೆಂಗಳೂರು, : ಅಪರಿಚಿತ ಮಹಿಳೆಯ ಮುಖ ಜಜ್ಜಿ ಕೊಲೆಗೈದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ವಡ್ಡರಹಳ್ಳಿ (Vaddarahalli) ಗ್ರಾಮದ ಬಳಿ ನಡೆದಿದೆ. ನರಸಿಂಹಮೂರ್ತಿ ಎಂಬುವರ ಜಮೀನಿನಲ್ಲಿ ಅಂದಾಜು 35 ವರ್ಷದ ಮಹಿಳೆಯನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆನೆಲಮಂಗಲಎಎಸ್‌ಪಿ ಪುರುಷೋತ್ತಮ್ ಹಾಗೂ ಡಿವೈಎಸ್‌ಪಿ ಜಗದೀಶ್‌ ಭೇಟಿ ನೀಡಿ, ಸೋಕೋ ಟೀಮ್ ಹಾಗೂ ಡಾಗ್ ಸ್ಕೋರ್ಡ್ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುಟ್ಟ ಸ್ಥಿತಿಯಲ್ಲಿ ಯುವಕ ಶವವಾಗಿ ಪತ್ತೆ

ಬೆಂಗಳೂರು: ಮುಖ ಜಜ್ಜಿ ಅಪರಿಚಿತ ಮಹಿಳೆಯನ್ನ ಕೊಲೆಗೈದ ದುಷ್ಕರ್ಮಿಗಳು

ರಾಯಚೂರು: ಬೆಂಕಿ ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಯುವಕ ಶವವಾಗಿ ಪತ್ತೆಯಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಿಟ್ಟಿ ಕ್ಯಾಂಪ್‌ ಗ್ರಾಮದ ಹೊಲದಲ್ಲಿ ಪತ್ತೆಯಾಗಿದೆ. ಸುರೇಶ್ ನಾಯಕ್ (20) ಶವವಾಗಿ ಪತ್ತೆಯಾಗಿರುವ ಯುವಕ.
ಮೂರು ದಿನಗಳ ಹಿಂದೆಯೇ ಮನೆಯಿಂದ ಸ್ನೇಹಿತರ ಜೊತೆ ತೆರಳಿದ್ದ ಸುರೇಶ್, ಸ್ನೇಹಿತರ ಜೊತೆ ಪಾರ್ಟಿ ಮಾಡುವುದಾಹಿ ಹೇಳಿ ಹೋಗಿದ್ದ. ಬಳಿಕ ಮನೆಗೆ ಬಾರದೆ ನಿಗೂಢವಾಗಿ ನಾಪತ್ತೆಯಾಗಿದ್ದ. ಇದೀಗ ಮೂರು ದಿನಗಳ ಬಳಿಕ ಹೊಲದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ