ಬೆಳಗಾವಿ : ಕಾಗವಾಡ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪ್ರಶಾಂತ ಅಪರಾಜ ಅಕಾಲಿಕ ಮರಣ ಹೊಂದಿದ್ದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಕಂಬನಿ ಮಿಡಿದ್ದಾರೆ.
ಈ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದು.
ಬೆಳಗಾವಿ ಜಿಲ್ಲೆಯ ಕಾಗವಾಡ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಶ್ರೀ ಪ್ರಶಾಂತ ಅಪರಾಜ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ.ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.