Breaking News
Home / ಜಿಲ್ಲೆ / ಯಾದಗಿರಿ / ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

Spread the love

ಯಾದಗಿರಿ, ಮಾರ್ಚ್​ 05: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)​​ ಅವರಿಗೆ ಜಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಸುರುಪುರ ಠಾಣೆ ಪೊಲೀಸರು (Surapur Police) ತಡರಾತ್ರಿ ಬಂಧಿಸಿದ್ದಾರೆ.

ಮೊಹಮ್ಮದ್ ರಸೂಲ್ ಕಡ್ದಾರೆ (45) ಬಂಧಿತ ಆರೋಪಿ. ಯಾದಗಿರಿ ಜಿಲ್ಲೆ ಸುರಪುರದ ರಂಗಂಪೇಟೆ ನಿವಾಸಿಯಾಗಿರುವ ರಸೂಲ್ ಕಡ್ದಾರೆ ಹೈದರಾಬಾದ್​ನಲ್ಲಿ ಕೂಲಿ ಮಾಡುತ್ತಿದ್ದನು.

PM Modi Death Threat: ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ

ಕೈಯಲ್ಲಿ ತಲ್ವಾರ್ ಹಿಡಿದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ “ಕಾಂಗ್ರೆಸ್ ಹೀಗೆಲ್ಲ ಆಡಳಿತ ಮಾಡಿಲ್ಲ. ನರೇಂದ್ರ ಮೋದಿ ಪ್ರಧಾನಿ ಆಗದ್ದೇನೆ ಎಂದು ನಾಟಕ ಮಾಡುತ್ತಿದ್ದಿಯಾ? ಆಡಳಿತ ಸರಿಯಾಗಿ ಮಾಡುತ್ತಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ನಿಮ್ಮಂತಹ ಕೆಟ್ಟ ಆಡಳಿತ ಮಾಡಿಲ್ಲ.

ನೀನು ಟೀ ಮಾರಾಟ ಮಾಡುತ್ತಿದ್ದೆ. ಪಕ್ಷ ಬಿಟ್ಟು ನನ್ನ ಜೊತೆ ಜಗಳಕ್ಕೆ ಬಾ. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಪ್ರಧಾನಿ ಮೋದಿ ನಿನ್ನ ದೇಹದ ನರಗಳು ಕಟ್ ಮಾಡುತ್ತೇನೆ. ಕಾಂಗ್ರೆಸ್ ಜಿಂದಾಬಾದ್​” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಫೇಸ್​ಬುಕ್​ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದನು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ