Breaking News

ಸ್ಫೋಟ ಸಂಭವಿಸಿ ವಾರದ ನಂತರ ರಾಮೇಶ್ವರಂ ಕೆಫೆ ಪುನರಾರಂಭ

Spread the love

ಬೆಂಗಳೂರು, ಮಾರ್ಚ್​​ 8: ಬಾಂಬ್ ಸ್ಫೋಟ (Bomb Blast) ಸಂಭವಿಸಿದ ನಂತರ ವಾರದ ಬಳಿಕ ಇದೀಗ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಮತ್ತೆ ಕಾರ್ಯಾರಂಭ ಮಾಡಿದೆ.

ಶಿವರಾತ್ರಿ (Maha Shivratri) ದಿನವೇ ಕೆಫೆ ಪುನರಾರಂಭ ಮಾಡುವುದಾಗಿ ಮ್ಯಾನೇಜ್​​ಮೆಂಟ್ ಈಗಾಗಲೇ ತಿಳಿಸಿತ್ತು. ಅದರಂತೆ ಶುಕ್ರವಾರ ಬೆಳಿಗ್ಗೆಯೇ ಕೆಫೆ ಪುನರಾರಂಭ ಮಾಡಿದೆ.

 

ಬೆಂಗಳೂರು: ಸ್ಫೋಟ ಸಂಭವಿಸಿ ವಾರದ ನಂತರ ರಾಮೇಶ್ವರಂ ಕೆಫೆ ಪುನರಾರಂಭ

ಕೆಫೆಯಲ್ಲಿ ಬೆಳಗ್ಗೆಯಿಂದಲೇ ಪೂಜಾ ಕೈಂಕರ್ಯಗಳು ನೆರವೇರಿದವು. ಆ ಮೂಲಕ ಮತ್ತೆ ಗ್ರಾಹಕರಿಗೆ ಕೆಫೆ ಮುಕ್ತವಾಗಿದೆ.

ಹೇಗಿದೆ ಭದ್ರತಾ ವ್ಯವಸ್ಥೆ?

ಬಾಂಬ್ ಸ್ಫೋಟದ ಘಟನೆಯಿಂದ ಎಚ್ಚೆತ್ತುಕೊಂಡಿರುವ ರಾಮೇಶ್ವರಂ ಕೆಫೆ ಇದೀಗ ಪುನರಾರಂಭದ ವೇಳೆ ಸೂಕ್ತ ಮುನ್ನೆಚ್ಚರಿಕೆ, ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

ಕೆಫೆಯ ಪ್ರವೇಶ ದ್ವಾರದ ಬಳಿ 2 ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಶನಿವಾರದಿಂದ ಪ್ರತಿ ಗ್ರಾಹಕರನ್ನು ಹ್ಯಾಂಡ್ ಡಿಟೆಕ್ಟರ್ ಮೂಲಕ ತಪಾಸಣೆ ಮಾಡಿಯೇ ಒಳ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತದೆ.

ಕೆಫೆ ಸುತ್ತ ಅಳವಡಿಸಿದ್ದ ಬ್ಯಾರಿಕೇಡ್​ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ಮಧ್ಯೆ, ಪೊಲೀಸ್ ಪಹರೆಯಲ್ಲೇ ಪೂಜಾ ಕಾರ್ಯಕ್ರಮಗಳು ನೆರವೇರಿದವು.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ