Breaking News

ಬಸ್​ನಿಂದ ಆಯತಪ್ಪಿ ಬಿದ್ದು ಮೃತಪಟ್ಟ ನಿರ್ವಾಹಕ 

Spread the love

ಮೈಸೂರು, ಮಾರ್ಚ್​ 09: ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ  ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ  ಮೃತಪಟ್ಟಿರುವ ಘಟನೆ ನಂಜನಗೂಡು  ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.

ಚಾಮರಾಜನಗರ (Chamarajanagar) ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ ಬಸ್​ನ ಫುಟ್​ ಬೋರ್ಡ್​​ನಲ್ಲಿ ನಿಂತಿದ್ದರು.

ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಂಜನಗೂಡು ಡಿವೈಎಸ್​​ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಿಗ್‌ ಡೀಲ್‌ ಸಕ್ಸಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್‌ ಸಹಿ

Spread the loveವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್‌ ಕಂಡಿದೆ. ರಷ್ಯಾ ತೈಲ ಖರೀದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ