Breaking News
Home / ರಾಜಕೀಯ / ಈಜುಕೊಳಗಳಿಗೆ ಕಾವೇರಿ ನೀರು ಬಳಸಿದರೆ 5,000 ರೂ. ದಂಡ

ಈಜುಕೊಳಗಳಿಗೆ ಕಾವೇರಿ ನೀರು ಬಳಸಿದರೆ 5,000 ರೂ. ದಂಡ

Spread the love

ಬೆಂಗಳೂರು: ರಾಜಧಾನಿಯಲ್ಲಿ (Bengaluru Water Crisis) ನೀರಿನ ಸಮಸ್ಯೆ ತಲೆದೋರಿದೆ. ಸಮಸ್ಯೆ ನಿಭಾಯಿಸಲು ಹಲವು ಕ್ರಮಕೈಗೊಂಡಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (Bangaluru Water Supply and Sewerage Board), ನಗರದ ಈಜುಕೊಳಗಳಿಗೆ ಕಾವೇರಿ ನೀರನ್ನು ಬಳಸಬಾರದು ಎಂದು ಆದೇಶ ಹೊರಡಿಸಿದೆ.

ನಗರದ ಎಲ್ಲಾ ಕಡೆಗೂ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಹೀಗಾಗಿ ಈ ಕ್ರಮಕೈಗೊಳ್ಳಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ 5 ಸಾವಿರ ರೂ. ದಂಡ ಹಾಕಲಾಗುವುದು ಎಂದು ಮಂಡಳಿ ತಿಳಿಸಿದೆ

ಈ ಬಾರಿ ಮುಂಗಾರು ಮಳೆ ಕೊರತೆಯಿಂದ ನೀರಿನ ಅಭಾತ ಉಂಟಾಗಿದೆ. ಅಂತರ್ಜಲ ಮಟ್ಟ ಕುಸಿದಿದೆ. ನೀರು ಪೋಲಾಗುವುದನ್ನು ತಡೆಗಟ್ಟಲು ನಗರದಲ್ಲಿ ಕುಡಿಯುವ ನೀರನ್ನು ಈಜುಕೊಳ ಹಾಗೂ ಇತರೆ ಉದ್ದೇಶಗಳಿಗಾಗಿ ಬಳಕೆ ಮಾಡದಿರುವಂತೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ