Breaking News

ಬಿಜೆಪಿ ಟಿಕೆಟ್ ಪಡೆದ ಯದುವೀರ ಕೃಷ್ಣದತ್ತ ಒಡೆಯರ್‌ಗೆ ಮೊದಲನೇ ಶಾಕ್?

Spread the love

ರ್ನಾಟಕದಲ್ಲಿ ಇದೀಗ ಲೋಕಸಭೆ ಚುನಾವಣೆ ಅಬ್ಬರ ಜೋರಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಹಂತ ಹಂತವಾಗಿ ಟಿಕೆಟ್ ಘೋಷಣೆ ಮಾಡುತ್ತಿವೆ.

ಹೀಗಿದ್ದಾಗ ಇದೀಗ ಮೈಸೂರು & ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕಿದ್ದು ಮೈಸೂರಿನ ರಾಜವಂಶದ, ಯದುವೀರ ಕೃಷ್ಣದತ್ತ ಒಡೆಯರ್ ಅವರಿಗೆ.ಪ್ರತಾಪ್ ಸಿಂಹ ಅವರ ಕೈತಪ್ಪಿದ ಈ ಟಿಕೆಟ್ ಯದುವೀರ್‌ಗೆ ಸಿಕ್ಕಿದೆ. ಇದೇ ಖುಷಿ ಸಮಯದಲ್ಲೀಗ ಯದುವೀರ್ ಅವರಿಗೆ ದೊಡ್ಡ ಆಘಾತ ಕೂಡ ಎದುರಾಗಿದೆ!ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಹೀಗಾಗಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಇದರಿಂದ ಅನುಕೂಲ ಆಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಕಳೆದ ಕೆಲವು ತಿಂಗಳಿಂದ ಪರಿಸ್ಥಿತಿ ಬೇರೆಯೇ ಆಗುತ್ತಿದೆ.

ಕರ್ನಾಟಕದಲ್ಲಿ ಬಿಜೆಪಿಗೆ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನದಲ್ಲಿ ಗೆಲುವು ಸಿಗಲಿದೆ, ಎಂಬ ಮಾತು ಕೇಳಿಬರುತ್ತಿದೆ. ಹೀಗಿದ್ದಾಗಲೇ ಬಿಜೆಪಿ ನಾಯಕರು ಮತ್ತಷ್ಟು ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಮೈಸೂರು & ಕೊಡಗು ಕ್ಷೇತ್ರದಲ್ಲಿ ಯದುವೀರ ಕೃಷ್ಣದತ್ತ ಒಡೆಯರ್‌ಗೆ ಟಿಕೆಟ್ ಕೊಡಿಸಿದ್ದಾರೆ. ಹೀಗಾಗಿ ಮೈಸೂರು ಕ್ಷೇತ್ರದಲ್ಲಿ ಹೊಸ ಅಲೆ ಎದ್ದಿರುವಾಗಲೇ ಯದುವೀರ್ ಅವರಿಗೆ ದೊಡ್ಡ ಶಾಕ್ ಕೂಡ ಸಿಕ್ಕಿದೆ.ಕಾಂಗ್ರೆಸ್ ಸರ್ಕಾರದಿಂದ ಯದುವೀರ್‌ಗೆ ಶಾಕ್?ಅಷ್ಟಕ್ಕೂ ಮೈಸೂರು ರಾಜವಂಶಕ್ಕೆ ಭಾರಿ ಪ್ರಮಾಣದ ಆಸ್ತಿ ಇದೆ. ಈ ಪೈಕಿ ಬೆಂಗಳೂರು ನಗರದಲ್ಲಿ ಮೈಸೂರು ರಾಜವಂಶಕ್ಕೆ ಸೇರಿದ ಹಲವು ಆಸ್ತಿಗಳು ಇವೆ.

ಇದರಲ್ಲಿ ಬರುತ್ತಿರುವ ಆದಾಯ ಅಂದ್ರೆ ಹಣ ರಾಜವಂಶಕ್ಕೆ ಸೇರಿದ್ದು. ಹೀಗಿದ್ದಾಗಲೇ ಬೆಂಗಳೂರು ಪ್ಯಾಲೆಸ್ ಗ್ರೌಂಡ್ ಬಗ್ಗೆ ಆಗಾಗ ಕಿರಿಕ್ ಆಗುತ್ತಲೇ ಇರುತ್ತದೆ.20 ಕ್ಷೇತ್ರಗಳ ಬಿಜೆಪಿ ಟಿಕೆಟ್‌ ಘೋಷಣೆ: ಎಂಪಿ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ: ಮಾಜಿ ಸಿಎಂಮೈಸೂರು ರಾಜವಂಶದ ಆಸ್ತಿ ಎಂಬ ಮಾತಿನ ನಡುವೆಯು ಇಲ್ಲ ಎಂಬ ವಾದವೂ ಇದೆ. ಹೀಗಿದ್ದಾಗ ಇದೀಗ ಕರ್ನಾಟಕ ಸರ್ಕಾರ ಬೆಂಗಳೂರು ಪ್ಯಾಲೆಸ್ ಗ್ರೌಂಡ್ ವಿಚಾರದಲ್ಲಿ ಕಠಿಣ ಕ್ರಮ ಕೈಗೊಂಡಿದೆ. ಇದು ಮೈಸೂರು ರಾಜವಂಶದ ಯದುವೀರ್‌ಗೆ ದೊಡ್ಡ ಆಘಾತ ನೀಡಿದೆ ಎಂಬ ಮಾತು ಕೇಳಿಬರುತ್ತಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ