Breaking News

ಹಾವೇರಿ, ಧಾರವಾಡ ಟಿಕೆಟ್ ವಂಚಿತ ಜಗದೀಶ್ ಶೆಟ್ಟರ್​ಗೆ ಮತ್ತೊಂದು ಆಫರ್ ನೀಡಿದ ಅಮಿತ್ ಶಾ!

Spread the love

ಬೆಳಗಾವಿ, ಮಾರ್ಚ್​ 14: ಹಾವೇರಿ ಮತ್ತು ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿ (BJP) ಟಿಕೆಟ್ ದೊರೆಯದೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಅವರ ಮನವೊಲಿಕೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಖಾಡಕ್ಕೆ ಇಳಿದಿದ್ದಾರೆ. ಶೆಟ್ಟರ್​ಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಅಮಿತ್ ಶಾ, ಬೆಳಗಾವಿಯಿಂದ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದ್ದಾರೆ. ಸದ್ಯ ಬಿಜೆಪಿ 20 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮುಂದಿನ ಹಂತದ ಅಭ್ಯರ್ಥಿ ಆಯ್ಕೆ ವೇಳೆ ಶೆಟ್ಟರ್​​​ರನ್ನು ಬೆಳಗಾವಿಯಿಂದ ಅಭ್ಯರ್ಥಿಯನ್ನಾಗಿ ಪರಿಗಣಿಸುವ ಸುಳಿವು ನೀಡಿದೆ.

ಅಮಿತ್ ಶಾ ಜೊತೆ ಮಾತನಾಡಿರುವ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚಿಸಲು ಕಾಲಾವ ಕೇಳಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಿದರೆ ಸೋಲುವ ಬಗ್ಗೆ ಶೆಟ್ಟರ್​​ಗೆ ಭೀತಿ ಇದೆ ಎನ್ನಲಾಗಿದೆ. ಹೀಗಾಗಿ ಅವರು ಕಾಲಾವಕಾಶ ಕೇಳಿರುವ ಸಾಧ್ಯತೆ ಇದೆ. ಆದರೆ ಖುದ್ದು ಅಮಿತ್ ಶಾ ಸೂಚನೆ ನೀಡಿರುವುದರಿಂದ ಶೆಟ್ಟರ್ ಪರಿಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ