Breaking News

CAA: ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಅಮಿತ್ ಶಾ

Spread the love

ವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಎಂದಿಗೂ ಹಿಂಪಡೆಯುವುದಿಲ್ಲ ಮತ್ತು ಬಿಜೆಪಿ ನೇತೃತ್ವದ ಸರ್ಕಾರವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ.

“ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಇದು ನಮ್ಮ ಸಾರ್ವಭೌಮ ಹಕ್ಕು, ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಸಿಎಎ ಅನ್ನು ಎಂದಿಗೂ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಬಿಜೆಪಿಯ ಹಿರಿಯ ನಾಯಕ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

 

ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎಯ ನಿಯಮಗಳನ್ನು ಈ ವಾರದ ಆರಂಭದಲ್ಲಿ ತಿಳಿಸಲಾಯಿತು, ಇದು ವಿರೋಧ ಪಕ್ಷಗಳಿಂದ ಟೀಕೆಗೂ ಗುರಿಯಾಗಿದೆ. ಅಲ್ಲದೆ ವಿರೋಧ ಪಕ್ಷಗಳು ನಮ್ಮ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದೂ ಹೇಳಿಕೊಂಡಿದೆ.

ಒಂದು ಕಡೆ ತಾವು ಅಧಿಕಾರಕ್ಕೆ ಬಂದರೆ ಕಾನೂನನ್ನು ರದ್ದುಪಡಿಸುವ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರು ಹೇಳಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು ವಿರೋಧ ಪಕ್ಷಗಳು ಈ ಭಾರಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಅವರಿಗೆ ಗೊತ್ತಿದ್ದರೂ ಜನರ ಮನ ಪರಿವರ್ತನೆ ಮಾಡಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಲ್ಲದೆ ಲೋಕ ಸಭಾ ಚುನಾವಣೆಯ ತಯಾರಿ ಆರಂಭವಾದಾಗಿನಿಂದ ಇಂಡಿಯಾ ಮೈತ್ರಿಕೂಟದಲ್ಲಿ ಹಲವು ರಾಜಕೀಯ ಪಕ್ಷಗಳು ಹೊರಬಂದು ಸ್ವತಂತ್ರವಾಗಿ ಸ್ಪರ್ದಿಸುವ ಹೇಳಿಕೆಗಳನ್ನು ನೀಡಿದ್ದು ಇದರಿಂದಲೇ ಅರ್ಥವಾಗುತ್ತೆ ಇಂಡಿಯಾ ಮೈತ್ರಿಕೂಟ ಎಷ್ಟು ದುರ್ಬಲವಾಗಿದೆ ಎಂಬುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪತ್ನಿ ಬದುಕಿದ್ದರೂ, ಕೊಲೆ ಆರೋಪದಲ್ಲಿ ಅಮಾಯಕನಿಗೆ ಶಿಕ್ಷೆ: ಮೂವರು ಇನ್ಸ್​ಪೆಕ್ಟರ್​ಗಳು ಸಸ್ಪೆಂಡ್​

Spread the loveಮೈಸೂರು: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ