ಕೊಪ್ಪಳ: ನಾನು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನ ಕೆಲವರು ನನ್ನ ಜೊತೆ ಸೌಜನ್ಯಕ್ಕಾಗಿ ಮಾತನಾಡಿದ್ದಾರೆ. ಆದರೆ ಪಕ್ಷ ಸೇರುವ ಬಗ್ಗೆ ಮಾತನಾಡಿಲ್ಲ. ನಾನು ಪಕ್ಷದಲ್ಲಿಯೇ ಇರುತ್ತೇನೆ. ಕೆಆರ್ಪಿಪಿ ಪಕ್ಷಕ್ಕೆ ಹೋಗುವೆ ಎನ್ನುವ ವಿಚಾರ ಎಲ್ಲವೂ ಊಹಾಪೋಹ.
ನಾನು ಈಗಲೇ ಎಲ್ಲವೂ ನಿರ್ಧಾರ ಮಾಡಿಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು.
ಮುಂದಿನ ಲೋಕಸಭೆ ಚುನಾವಣೆಗೆ ಅವರಿಗೆ ಟಿಕೆಟ್ ತಪ್ಪಿದ ಬಳಿಕ ಬೆಂಬಲಿಗರು ಪಕ್ಷದ ಅಭ್ಯರ್ಥಿಗೆ ಮುತ್ತಿಗೆ ಹಾಕಿದ ಘಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾರ್ಯಕರ್ತರು ಬಿಜೆಪಿ ಕಚೇರಿ ಧ್ವಂಸ ಮಾಡುವುದು ಸರಿಯಲ್ಲ. ಅಭ್ಯರ್ಥಿಯ ಮೇಲೆ ಹಲ್ಲೆಗೆ ಯತ್ನಿಸುವುದು ಸರಿಯಲ್ಲ. ನಾವು ವರಿಷ್ಠ ನಿರ್ಧಾರಕ್ಕೆ ಬದ್ದವಾಗಿರೋಣ ಎಂದು ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ನಾನು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತೇನೆ. ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಅವರು (ಬಸವರಾಜ) ಇಂದು ನನ್ನ ಭೇಟಿ ಮಾಡಲು ಆಗಮಿಸಿದ್ದರು. ಏಕಾಏಕಿ ಬಂದಿದ್ದರಿಂದ ಕಾರ್ಯಕರ್ತರು ಗೊಂದಲ ಮಾಡಿದ್ದಾರೆ. ಒಂದಡರೆಡು ದಿನದಲ್ಲಿ ಅವರನ್ನು ಸಮಾಧಾನ ಪಡಿಸುತ್ತೇನೆ ಎಂದು ಕರಡಿ ಸಂಗಣ್ಣ ಹೇಳಿದರು.