Breaking News
Home / ರಾಜ್ಯ / ಹೆಚ್‍ಡಿಕೆ -C.M. ಭೇಟಿಯಾದ್ರೆ ಏನು ತಪ್ಪು?- ಮಾಧುಸ್ವಾಮಿ

ಹೆಚ್‍ಡಿಕೆ -C.M. ಭೇಟಿಯಾದ್ರೆ ಏನು ತಪ್ಪು?- ಮಾಧುಸ್ವಾಮಿ

Spread the love

ಹಾಸನ: ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿದರೆ ಏನು ತಪ್ಪು, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರೂ ಲೀಡರ್ಸ್. ರಾಜ್ಯದ ಹಿತಾಸಕ್ತಿಗಾಗಿ ಭೇಟಿ ಮಾಡಿದರೆ ಬೇರೆ ತಿಳಿಯಬಾರದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಹಾಸನ ಜಿಲ್ಲೆಯ ಹಳೇಬೀಡು ಕೆರೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸಿಎಂ ಮತ್ತು ಮಾಜಿ ಸಿಎಂ ಭೇಟಿ ವಿಷಯ ಕೇಳಿದ್ದಕ್ಕೆ ಕೈಮುಗಿದರು. ಬಳಿಕ ಮಾತನಾಡಿ ಶಿರಾ ಮತ್ತು ಆರ್.ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಮೀಲಾಗಿದ್ದರು ಎಂಬ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ ಉಪ ಚುನಾವಣೆಯಲ್ಲಿ ಯಾವುದೇ ಶಾಮೀಲಾಗಿಲ್ಲ ಎಂದು ಸ್ಪಷ್ಟನೆ ನೀಡಿದರಲ್ಲದೇ ಇಬ್ಬರೂ ಚುನಾವಣೆ ಮಾಡಿದ್ದಾರೆ ಎಂದರು.

ಶಾಸಕ ಮುನಿರತ್ನಗೆ ಸಚಿವ ಸ್ಥಾನ ನೀಡುವ ವಿಚಾರ ಸಂಬಂಧ, ಇದಕ್ಕೆ ಉತ್ತರ ನೀಡಲು ಯಡಿಯೂರಪ್ಪ ಒಬ್ಬರೇ ಸಮರ್ಥರು ನಾನೇನನ್ನೂ ಹೇಳೊಲ್ಲಾ ಎಂದು ಹೇಳಿದರು. ಸಚಿವ ಸಂಪುಟದಿಂದ ನಾಲ್ವರು ಸಚಿವರನ್ನು ಕೈಬಿಡುತ್ತಾರೆಂಬ ವಿಚಾರ ಇದುವರೆಗೂ ಸಿಎಂ ಯಾರ ಜತೆಯೂ ಚರ್ಚಿಸಿಲ್ಲ. ಮುನಿರತ್ನ ಅವರ ಚುನಾವಣೆಯಲ್ಲಿ ಮಂತ್ರಿ ಮಾಡುವುದಾಗಿ ಸಿಎಂ ಹೇಳಿದ್ದಾರೆ ಅದರ ಬಗ್ಗೆಯಷ್ಟೇ ನಾನು ಹೇಳಬಹುದು. ಆದರೆ ಬೇರೆ ವಿಷಯ ಇದುವರೆಗೂ ಮಾತನಾಡಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳದರು.


Spread the love

About Laxminews 24x7

Check Also

ಚುನಾವಣೆ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆ: ವಿಚಾರಣೆ ಏ.20ಕ್ಕೆ ಮುಂದೂಡಿಕೆ

Spread the loveಶಿವಮೊಗ್ಗ: ಲೋಕಸಭೆ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ಪ್ರಚಾರದ ವೇಳೆ ಹಾಗೂ ಸಭೆಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ