ಲಕ್ನೋ: ರಾಷ್ಟ್ರೀಯ ಪಕ್ಷಗಳು ಸೇರಿದಂತೆ ದೊಡ್ಡವರ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. ಪ್ರಾದೇಶಿಕ ಪಕ್ಷವಾಗಿರುವ ಬಿಎಸ್ಪಿ ಜೊತೆಗೂ ತಾವು ಹೋಗಲ್ಲ ಎಂಬುದನ್ನ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ.
2022ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ನೇತೃತ್ವದ ಪ್ರಗತಿಶೀಲ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉತ್ಸಾಹ ತೋರಿಸಿದ್ದಾರೆ. ಚುನಾವಣೆಯಲ್ಲಿ ಜಸ್ವಂತ್ ನಗರದ ವಿಧಾನಸಭಾ ಕ್ಷೇತ್ರಗಳನ್ನ ಬಿಟ್ಟುಕೊಡಲು ಸಿದ್ಧ ಎಂಬುದನ್ನ ಅಖಿಲೇಶ್ ಇಂದಿನ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಚುನಾವಣೆ ತಯಾರಿಯನ್ನು ಅಖಿಲೇಶ್ ಆರಂಭಿಸಿದ್ದಾರೆ.