ಬಿಎಸ್ ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಲೋಕಸಭೆ ಚುನಾವಣೆ ಮುಗಿದ ಮೇಲೆ ಗೊತ್ತಾಗಲಿದೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ, ಬಿವೈ ವಿಜಯೇಂದ್ರ ಟಾಂಗ್ ಕೊಟ್ಟರು.
ಶಿವಮೊಗ್ಗ, ಮಾರ್ಚ್ 18: ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಪುತ್ರ ಬಿವೈ ವಿಜಯೇಂದ್ರ (BY Vijayendra) ಮೇಲೆ ಮುನಿಸಿಕೊಂಡು, ಅವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಈ ವಿಚಾರವಾಗಿ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಎಲ್ಲವೂ ಸರಿಯಾಗುತ್ತದೆ, ಎಲ್ಲವನ್ನು ಸರಿಪಡಿಸುವ ಕೆಲಸ ವರಿಷ್ಠರು ಮಾಡುತ್ತಾರೆ. ಬಿಎಸ್ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ. ಸೈಕಲ್ನಲ್ಲಿ ರಾಜ್ಯಾದ್ಯಂತ ಸುತ್ತಾಡಿ ಪಕ್ಷ ಕಟ್ಟಿದ ಫಲವಾಗಿ ರಾಜ್ಯದಲ್ಲಿ ಇಂದು ಪಕ್ಷ ಬಲಿಷ್ಠವಾಗಿದೆ.
ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ ಎಂದು ಪರೋಕ್ಷವಾಗಿ ಕೆಎಸ್ ಈಶ್ವರಪ್ಪಗೆ ಟಾಂಗ್ ಕೊಟ್ಟರು.