Breaking News
Home / ರಾಜಕೀಯ / ಎರಡನೇ ಹಂತದ ಕೋವಿಡ್ ಸೋಂಕಿನ ಅಲೆ ಅಪ್ಪಳಿಸುವ ಆತಂಕದ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರ

ಎರಡನೇ ಹಂತದ ಕೋವಿಡ್ ಸೋಂಕಿನ ಅಲೆ ಅಪ್ಪಳಿಸುವ ಆತಂಕದ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರ

Spread the love

ಮುಂಬೈ, :- ಎರಡನೇ ಹಂತದ ಕೋವಿಡ್ ಸೋಂಕಿನ ಅಲೆ ಅಪ್ಪಳಿಸುವ ಆತಂಕದ ನಡುವೆಯೂ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿರುವ ಮಹಾರಾಷ್ಟ್ರ ಸರ್ಕಾರ ಸುರಕ್ಷತೆ ದೃಷ್ಟಿಯಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.

ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ಬಳಸಬೇಕು. ದೇವರ ಪ್ರತಿಮೆ, ಪವಿತ್ರ ಗ್ರಂಥಗಳು ಸೇರಿದಂತೆ ಯಾವುದೇ ವಸ್ತುಗಳನ್ನು ಮುಟ್ಟುವಂತಿಲ್ಲ. ತೀರ್ಥ, ಪ್ರಸಾದ ವಿತರಣೆಯನ್ನು ನಿಷೇಸಲಾಗಿದೆ.

ಪಾದರಕ್ಷೆಗಳನ್ನು ಧಾರ್ಮಿಕ ಕೇಂದ್ರಗಳಿಂದ ಹೊರಗಡೆ ಬಿಡಬೇಕು. ಧ್ವನಿ ಮುದ್ರಿತ ಭಕ್ತಿ ಸಂಗೀತವನ್ನು ಮಾತ್ರ ಹಾಕಬೇಕು. ಗುಂಪು ಗುಂಪಾಗಿ ಹಾಡುವುದನ್ನು ನಿಷೇಸಲಾಗಿದೆ.

ಭಕ್ತರು ಪ್ರಾರ್ಥಿಸಲು ತಮ್ಮದೇ ಆದ ಮ್ಯಾಟ್ ಅಥವಾ ಬಟ್ಟೆ ತೆಗೆದುಕೊಂಡು ಬರಬೇಕು. ನಂತರ ಅದನ್ನು ವಾಪಸ್ ತೆಗೆದುಕೊಂಡು ಹೋಗಬೇಕು.ದಿನದಲ್ಲಿ ಹಲವಾರು ಬಾರಿ ಧಾರ್ಮಿಕ ಕೇಂದ್ರಗಳನ್ನು ಶುಚಿಗೊಳಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ತಾಕೀತು ಮಾಡಿದೆ. ಜನವರಿಯಲ್ಲಿ ಮಹಾರಾಷ್ಟ್ರಕ್ಕೆ ಎರಡನೇ ಹಂತದ ಕೊರೊನಾ ಅಲೆ ಅಪ್ಪಳಿಸಲಿದೆ ಎಂಬ ಆತಂಕವಿದೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ