Breaking News

ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ

Spread the love

ಬೆಂಗಳೂರು: ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಮುಸ್ಲಿಂ ಸಮುದಾಯದ ಯುವಕರಿಂದ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಘಟನೆಯ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಸುಲೇಮಾನ್, ಶಾನವಾಜ್, ರೋಹಿತ್, ದ್ಯಾನೀಶ್ ಮತ್ತು ತರುಣ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆಜಾನ್ ಸಮಯದಲ್ಲಿ ಹನುಮಂತನ ಭಕ್ತಿಗೀತೆ ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ

ಮುಖೇಶ್ ಹಲ್ಲೆಗೊಳಗಾಗಿರುವ ಯುವಕ. ವರ್ಧಮಾನ್ ಟೆಲಿಕಾಮ್’ ಎಂಬ ಮೊಬೈಲ್ ಅಂಗಡಿ ನಡೆಸುತ್ತಿದ್ದ ಮುಖೇಶ್. ಸಂಜೆ ಸಮಯ ಮೊಬೈಲ್ ಶಾಪ್‌ನಲ್ಲಿ ಹನುಮಂತನ ಭಕ್ತಿಗೀತೆ ಹಾಡುಗಳನ್ನು ಹಾಕಿದ್ದ ಯುವಕ. ಈ ಸಮಯದಲ್ಲಿ ಅಂಗಡಿಗೆ ಬಂದಿದ್ದ ಮುಸ್ಲಿಂ ಸಮುದಾಯ ಯುವಕರು. ಸಂಜೆ ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕ್ತಿಯ ಅಂತಾ ಜಗಳ ತೆಗೆದಿದ್ದಾರೆ. ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯಿಂದ ಹೊರ ಎಳೆದು ಮುಖೇಶ್​ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದಾರೆ. ನೆಲಕ್ಕೆ ಕೆಡವಿ ಕಾಲಿನಿಂದ ಒದ್ದು ಹಲ್ಲೆ ಮಾಡಿ ಹೋಗಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ