Breaking News

ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು.; ಜಿಪಂ ಸಿಇಒ ರಾಹುಲ್ ಶಿಂಧೆ

Spread the love

ಬೆಳಗಾವಿ  : ಬೆಳಗಾವಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಗಳನ್ನು ಪರಿಷ್ಕರಣೆ ಮಾಡಬೇಕು. ವಯಸ್ಕರ ಮತದಾರರ ಪಟ್ಟಿಗಳ ಮಾಹಿತಿ ಸಂಗ್ರಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ಚಿಕ್ಕೋಡಿ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಫೆ.20) ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ನಡೆದ ಪೂರ್ವ ಸಿದ್ಧತೆಯ ಸಭೆಯಲ್ಲಿ ಅವರು ಮಾತನಾಡಿದರು.

ಮತಗಟ್ಟೆಗಳನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಒಂದು ವೇಳೆ ದುರಸ್ತಿ ಇದ್ದಲ್ಲಿ ಸರಿಪಡಿಸಿಕೊಳ್ಳಬೇಕು. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ತಿಳಿಸಿದರು.

ಮತಗಟ್ಟೆ ಅಧಿಕಾರಿಗಳಿಗೆ ಪ್ರಾತ್ಯಾಕ್ಷತೆ ತರಬೇತಿ ನೀಡಬೇಕು. ಮತದಾರರು ಹೆಚ್ಚು ಮತದಾನ ಮಾಡುವ ನಿಟ್ಟಿನಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಲೋಕಸಭೆ ಚುನಾವಣೆಯಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ‌ ರೀತಿಯಲ್ಲಿ ಕೆಲಸ ಮಾಡಬೇಕು. ಎಲ್ಲ ಅಧಿಕಾರಿಗಳು ತಂಡವಾಗಿ ಕೆಲಸ ಮಾಡುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದರು.


Spread the love

About Laxminews 24x7

Check Also

ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ

Spread the loveಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ