Breaking News

ಬೆಂಗಳೂರಲ್ಲಿ ಶಾಲೆಯ ಸಮೀಪವೇ ಜಿಲೆಟಿನ್ ಪತ್ತೆ

Spread the love

ಬೆಂಗಳೂರು,- ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಘಟನೆ ಮಾಸುವ ಮುನ್ನವೇ ನಗರದ ಶಾಲೆಯೊಂದರ ಸಮೀಪದ ಖಾಲಿ ನಿವೇಶನದಲ್ಲಿ ಸ್ಪೋಟಕವಸ್ತುಗಳು ಪತ್ತೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.’

ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿಯ ಶಾಲೆಯ ಮುಂಭಾಗದ ಖಾಲಿ ಜಮೀನಿನಲ್ಲಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್ವೊಂದರಲ್ಲಿ ಜಿಲೆಟಿನ್ ಕಡ್ಡಿ, ಎಲೆಕ್ಟ್ರಿಕಲ್ ಡಿಟೋನೇಟರ್ ಸೇರಿದಂತೆ ಇತರೆ ಕೆಲವು ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು,ಆತಂಕಕ್ಕೆ ಕಾರಣವಾಗಿದೆ.

ಬಂಡೆಗಳನ್ನು ಸ್ಪೋಟಿಸಲು ಸ್ಪೋಟಕಗಳನ್ನು ತಂದು ಇಲ್ಲಿಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಸರ್ಕಾರ ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್

Spread the love ಕಾಂಗ್ರೆಸ್ ಸರ್ಕಾರ ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ : ಮಾಜಿ ಸಿಎಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ