Breaking News

ನಾನು ಗೆಲ್ಲೋದು ಖಚಿತ, ವಿಜಯೇಂದ್ರ ರಾಜ್ಯಾಧ್ಯಕ್ಷರ ಹುದ್ದೆ ಕಳೆದುಕೊಳ್ಳುತ್ತಾರೆ.- ಕೆ.ಎಸ್ ಈಶ್ವರಪ್ಪ

Spread the love

ಶಿವಮೊಗ್ಗ: ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟವನ್ನು ಬಿ.ವೈ ವಿಜಯೇಂದ್ರ ಕಳೆದುಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ.

ಇದು ಇಡೀ ರಾಜ್ಯದಲ್ಲೇ ಚರ್ಚೆಯಾಗಲಿದೆ. ನನ್ನ ಪುತ್ರನನ್ನು ಎಂಎಲ್ಸಿ ಮಾಡ್ತೀವಿ ಅಂದಿದ್ದರು, ನನ್ನ ರಾಜ್ಯಪಾಲರನ್ನಾಗಿ ಮಾಡ್ತೀವಿ ಅಂದಿದ್ದರು. ಆದ್ರೇ ನನಗೆ ಯಾವುದು ಬೇಡ ಎಂದರು.

ಲೋಕಸಭಾ ಚುನಾವಣೆ ಮುಗಿದು ಫಲಿತಾಂಶ ಘೋಷಣೆಯಾದ ಬಳಿಕ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರ ಹುದ್ದೆ ಕಳೆದುಕೊಳ್ಳುತ್ತಾರೆ. ಇದರಲ್ಲಿ ಎರಡು ಮಾತಿಲ್ಲ ಎಂಬುದಾಗಿ ಭವಿಷ್ಯ ನುಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ