Breaking News

ಪಕ್ಷದಿಂದ ಟಿಕೆಟ್‌ ಘೋಷಣೆಯ ಮರುದಿನವೇ ಪ್ರಚಾರ’- ಶೆಟ್ಟರ್‌

Spread the love

ಹುಬ್ಬಳ್ಳಿ:ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಮಾಡಲಾಗುವುದು. ಒಂದೆರಡು ದಿನಗಳಲ್ಲಿಯೇ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಟಿಕೆಟ್ ತಪ್ಪಿಸುವ ಷಡ್ಯಂತ್ರ ನಡೆದಿತ್ತುಎಂದು ನನಗೆ ಅನಿಸಿಲ್ಲ. ಬೆಳಗಾವಿಯ ಮುಖಂಡರಾದ ಅಭಯ ಪಾಟೀಲ, ಪ್ರಭಾಕರ ಕೋರೆ, ಅನಿಲ ಬೆನಕೆ, ಈರಣ್ಣ ಕಡಾಡಿ ಇನ್ನಿತರ ಪ್ರಮುಖರ ಜತೆ ಮಾತುಕತೆ ನಡೆಸಿದ್ದು, ಎಲ್ಲರು ಸೇರಿ ಚುನಾವಣೆ ನಡೆಸೋಣ ಎಂದಿದ್ದಾರೆ ಎಂದರು.

ದೇಶದಲ್ಲಿ ಎನ್ ಡಿಎ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಾತಾವರಣವಿದೆ. ಮೋದಿ ಮತ್ತೊಮ್ಮೆ ಪ್ರಧಾನಿ ಅಗಬೇಕೆನ್ನುವುದು ಜನರ ಆಶಯ ಎಂದು ಹೇಳಿದರು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ