Breaking News
Home / ರಾಜಕೀಯ / ಟಿಕೆಟ್‌ ಕೈ ತಪ್ಪಿದ್ದಕ್ಕೆ ಗಳಗಳನೆ ಅತ್ತ ವೀಣಾ ಕಾಶಪ್ಪನವರ್

ಟಿಕೆಟ್‌ ಕೈ ತಪ್ಪಿದ್ದಕ್ಕೆ ಗಳಗಳನೆ ಅತ್ತ ವೀಣಾ ಕಾಶಪ್ಪನವರ್

Spread the love

ಬೆಂಗಳೂರು, : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳಲ್ಲಿಯೂ ಟಿಕೆಟ್‌ ಲಾಬಿ ಜೋರಾಗಿದೆ. ಈಗಾಗಲೇ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮವಾಗಿದ್ದು, ಉಳಿದ ಕ್ಷೇತ್ರಗಳ ಟಿಕೆಟ್‌ಗಾಗಿ ಆಕಾಂಕ್ಷಿಗಳು ಹೋರಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿಯೂ ಟಿಕೆಟ್‌ ಫೈಟ್‌ ಜೋರಾಗಿದ್ದು, ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ವೀಣಾ ಕಾಶಪ್ಪನವರ್ ಕಣ್ಣೀರು ಹಾಕಿರುವ ಪ್ರಸಂಗ ನಡೆದಿದೆ.ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ವೀಣಾ ಕಾಶಪ್ಪನವರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು.

ಕಳೆದು ಕೆಲವು ವರ್ಷದಿಂದ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಇದೀಗ ಟಿಕೆಟ್‌ಗಾಗಿ ಹೈಮಾಂಡ್‌ ನಾಯಕರನ್ನು ಭೇಟಿಯಾದ ಅವರಿಗೆ ಶಾಂಕಿಗ್‌ ವಿಚಾರ ಕಾದಿತ್ತು.

ಬಾಗಲಕೋಟೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತಾ ಶಿವಾನಂದ ಪಾಟೀಲ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ ಕೈ ತಪ್ಪಿರುವುದು ಬಹುತೇಕ ಖಚಿತವಾಗುತ್ತಿದ್ದಂತೆ ವೀಣಾ ಕಾಶಪ್ಪನವರ್ ಗಳ ಗಳನೆ ಅಳುತ್ತಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

“ನನಗೆ ಟಿಕೆಟ್‌ ನೀಡುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿರುವುದು ನನ್ನ ಜಿಲ್ಲೆಯ ಜನ ನನ್ನ ಮೇಲಿಟ್ಟಿರುವ, ಪ್ರೀತಿ, ಅಭಿಮಾನ ಎಂದು ಭಾವಿಸುತ್ತೇನೆ.

ನನಗಿರುವುದೇ ಇದು ಕೊನೆ ಒಂದು ಅವಕಾಶ. ನನ್ನ ಜಿಲ್ಲೆಯ ಜನರು ನನ್ನನ್ನು ಕಳೆದುಕೊಳ್ಳಲು ಬಯಸುವುದಿಲ್ಲ. ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಇದೊಂದು ಕೊನೆಯ ಅವಕಾಶ.

ಇದನ್ನು ಇವರು ಈ ರೀತಿ ಮಾಡಿದ್ದಾರೆ ಅಂದರೆ ಒಬ್ಬ ಹೆಣ್ಣು ಮಗಳಿಗೆ ಅನ್ಯಾಯ ಮಾಡಿದ ಹಾಗೆ” ಎಂದು ಹೇಳಿ ಕಣ್ಣೀರು ಹಾಕಿದ್ದಾರೆ.

ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ಅಪ್ಪಂದಿರ ಸರ್ಕಸ್:‌ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದ ಮಂತ್ರಿಗಳು ಇವರು?”ಪ್ರತಿ ಶಾಸಕರ ಚುನಾವಣಾ ಪ್ರಚಾರದಲ್ಲಿ ನಾನು ಸಂಪೂರ್ಣವಾಗಿ ಭಾಗಿಯಾಗಿದ್ದೇನೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ