Breaking News
Home / ರಾಜಕೀಯ / ‘ಪಕ್ಷೇತರ’ ಅಭ್ಯರ್ಥಿಯಾಗಿ ಸಂಗಣ್ಣ ಕರಡಿ ಸ್ಪರ್ಧೆ

‘ಪಕ್ಷೇತರ’ ಅಭ್ಯರ್ಥಿಯಾಗಿ ಸಂಗಣ್ಣ ಕರಡಿ ಸ್ಪರ್ಧೆ

Spread the love

ಕೊಪ್ಪಳ : ತಮ್ಮ ಮಗನಿಗೆ ಲೋಕಸಭಾ ಟಿಕೆಟ್ ಸಿಕ್ಕಿಲ್ಲವೆಂದು ಈಗಾಗಲೇ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯವೇದಿದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದೀಗ ಬಿಜೆಪಿ ಮತ್ತೊಬ್ಬ ನಾಯಕ ಬಂಡಾಯವೇದಿದ್ದು ಕೊಪ್ಪಳದಿಂದ ಸಂಸದ ಕರಡಿ ಸಂಗಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಕೆಎಸ್ ಈಶ್ವರಪ್ಪ ಬಳಿಕ ಮತ್ತೊಬ್ಬ ಬಿಜೆಪಿ ನಾಯಕ ಬಂಡಾಯವೆದ್ದಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇದೆ ವಿಚಾರವಾಗಿ ನಾಳೆ ಕಾರ್ಯಕರ್ತರು ಹಾಗೂ ಬೆಂಬಲಿಗರ ಜೊತೆಗೆ ಸಂಗಣ್ಣ ಕರಡಿ ಸಭೆಯನ್ನು ಕರೆದಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ