Breaking News

ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ : ರಮೇಶ್ ಕತ್ತಿ ಸ್ಪಷ್ಟನೆ

Spread the love

ಬೆಳಗಾವಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಮಿಸ್ ಆಗಿದ್ದು ಅಣ್ಣ ಸಾಹೇಬ ಜೊಲ್ಲೆಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡಿದೆ ಈ ಕುರಿತು ರಮೇಶ್ ಕತ್ತಿ ಬೇಸರ ವ್ಯಕ್ತಪಡಿಸಿದ್ದು, ಯಾಕೆ ಟಿಕೆಟ್ ಕೈತಪ್ಪಿದೆ ಎಂದು ನನಗೆ ಮಾಹಿತಿ ಇಲ್ಲ ಎಂದು ಅವರು ಬೇಸರ ಹೊರಹಕಿದ್ದಾರೆ.

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಚಿಕ್ಕೋಡಿಯಿಂದ ಅಣ್ಣಾ ಸಾಹೇಬ ಜೊಲ್ಲೆಗೆ ಟಿಕೆಟ್ ನೀಡಿದ್ದಾರೆ.ಪಕ್ಷದ ಕಾರ್ಯಕರ್ತನಾಗಿ ಅವರ ಗೆಲುವಿಗೆ ನಾನು ಶ್ರಮಿಸುತ್ತೇನೆ.

ಆದರೆ ಯಾವುದೇ ಕಾರಣಕ್ಕೆ ನಾನು ಪಕ್ಷವನ್ನು ಬಿಡುವುದಿಲ್ಲ ಎಂದು ಬೆಳಗಾವಿಯಲ್ಲಿ ರಮೇಶ್ ಕತ್ತಿ ಸ್ಪಷ್ಟನೆ ನೀಡಿದರು.ಬಹುಶಹ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಲೋಕಸಭೆಯ ಅಭ್ಯರ್ಥಿಯಾಗಿ ನಾನು ಆಕಾಂಕ್ಷಿಯಾಗಿದ್ದೆ.

ಆ ನಿಟ್ಟಿನಲ್ಲಿ ನಮ್ಮ ಹಿರಿಯರು ಮರದರ್ಶಕರಾಗಿರುವ ಬಿಎಸ್ ಯಡಿಯೂರಪ್ಪ ಹಾಗೂ ಬಿ ವೈ ವಿಜಯೇಂದ್ರ ಅವರು ತಮ್ಮದೇ ಆಗಿರುವಂತಹ ಸಾಕಷ್ಟು ಪ್ರಯತ್ನ ಮಾಡಿದರು ಸಹಿತ ಟಿಕೆಟ್ನಿಂದ ನಾನು ವಂಚಿತನಾಗಿದ್ದೇನೆ ಎಂದರು.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ