Breaking News
Home / Uncategorized / ಮರಾಠ ಸಮುದಾಯ ಓಲೈಸುವ ಸಲುವಾಗಿ50 ಕೋಟಿಇದು ಉಪಚುನಾವಣೆ ತಂತ್ರ ನಾವು ಸುಮನಿರಲ್ಲ ಪ್ರತಿಭಟನೆ ಮಾಡ್ತೀವಿ :ಸಾ.ರಾ. ಗೋವಿಂದ

ಮರಾಠ ಸಮುದಾಯ ಓಲೈಸುವ ಸಲುವಾಗಿ50 ಕೋಟಿಇದು ಉಪಚುನಾವಣೆ ತಂತ್ರ ನಾವು ಸುಮನಿರಲ್ಲ ಪ್ರತಿಭಟನೆ ಮಾಡ್ತೀವಿ :ಸಾ.ರಾ. ಗೋವಿಂದ

Spread the love

ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ 50 ಕೋಟಿ ರೂಪಾಯಿ ಅನುದಾನ ನೀಡಿರುವುದನ್ನು ನಾನು ವಿರೋಧಿಸುತ್ತೇನೆ ಎಂದು ಸಾ.ರಾ ಗೋವಿಂದ್ ಅವರು ಹೇಳಿದ್ದಾರೆ.

ಅವರು, ಸಿಎಂ ನಿರ್ಧಾರವನ್ನು ಖಂಡಿಸಿ ನಾಡಿದ್ದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತೇವೆ. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ, ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿ ಎಂದು ಮನವಿ ಮಾಡಿದರು.

. 2020-21ರಲ್ಲಿ ಕನ್ನಡ ಅನುಷ್ಟಾನ ಮತ್ತು ಅಭಿವೃದ್ಧಿಗಾಗಿ ಪ್ರಯತ್ನ ಮಾಡೋಣ ಅಂತ ಸಿಎಂ ಹೇಳಿದ್ದರು, ಆದರೆ ಇಲ್ಲಿಯವರೆಗೆ 2 ಕೋಟಿ ಕೇಳಿದರೂ ಕನ್ನಡ ಅಭಿವೃದ್ಧಿಗೆ ಕೊಡುವುದಕ್ಕೆ ಆಗಲಿಲ್ಲ. ಆದರೆ ಮರಾಠ ಅಭಿವೃದ್ಧಿಗೆ 50 ಕೋಟಿ ಕೊಟ್ಟಿದ್ದಾರೆ ಎಂದು ಗುಡುಗಿದರು.

ಬೆಳಗಾವಿ ಬಸವ ಕಲ್ಯಾಣ ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್‍ವೈ ಆದೇಶ ಹೊರಡಿಸಿದ್ದರು. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ


Spread the love

About Laxminews 24x7

Check Also

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

Spread the loveಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ