Breaking News

ವೀಣಾಗೆ ಕೈತಪ್ಪಿದ ಟಿಕೆಟ್​! ಸಂಯುಕ್ತಾ ಪಾಟೀಲ ಕೊಟ್ಟ ಪ್ರತಿಕ್ರಿಯೆ ಹೀಗಿದೆ

Spread the love

ಬಾಗಲಕೋಟೆ: ಲೋಕಸಭಾ ಚುನಾವಣೆ 2024ರ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಾಗಲಕೋಟೆ ಕ್ಷೇತಕ್ಕೆ ‘ಕೈ’ ಅಭ್ಯರ್ಥಿಯಾಗಿ ಯಾರು ಹೊರಹೊಮ್ಮಲ್ಲಿದ್ದಾರೆ ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು.

ಈ ಮಧ್ಯೆ ಟಿಕೆಟ್​ ಸ್ಪರ್ಧೆಯಲ್ಲಿದ್ದ ಶಾಸಕ ವಿಜಯಾನಂದ ಪತ್ನಿ ವೀಣಾ ಕಾಶಪ್ಪನವರ ಮತ್ತು ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಮಧ್ಯೆ ಭಾರೀ ಹಣಾಹಣಿ ಇತ್ತು.

ಲೋಕ ಸಮರ 2024:​ ವೀಣಾಗೆ ಕೈತಪ್ಪಿದ ಟಿಕೆಟ್​! ಸಂಯುಕ್ತಾ ಪಾಟೀಲ ಕೊಟ್ಟ ಪ್ರತಿಕ್ರಿಯೆ ಹೀಗಿದೆ

ಆದ್ರೆ, ಕಾಂಗ್ರೆಸ್​ ತನ್ನ ಮೂರನೇ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಸಂಯುಕ್ತಾಗೆ ಟಿಕೆಟ್​ ಫೈನಲ್ ಆಯಿತು. ಈ ವಿಚಾರ ತಿಳಿಯುತ್ತಿದ್ದಂತೆ ಬೆಂಬಲಿಗರೊಂದಿಗೆ ಸಭೆ ಕರೆದ ವೀಣಾ ಕಾಶಪ್ಪನವರ, ಟಿಕೆಟ್​ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟರು.ವೀಣಾ ಕಾಶಪ್ಪನವರಿಗೆ ಟಿಕೆಟ್​ ಮಿಸ್​ ಆಗಿದ್ದೇ ತಡ, ತೀವ್ರ ಅಸಮಾಧಾನ ಹೊರಹಾಕಿದ ಬೆಂಬಲಿಗರು, ಕಾಂಗ್ರೆಸ್​ ಹಾಗೂ ಸಚಿವ ಶಿವಾನಂದ ಪಾಟೀಲ ಪುತ್ತಿ ಸಂಯುಕ್ತಾ ಪಾಟೀಲ ವಿರುದ್ಧ ಕಿಡಿಕಾರಿದರು. ಕೈ ಟಿಕೆಟ್​ ತಪ್ಪಿದರೇನು, ಪಕ್ಷೇತರ ಅಭ್ಯರ್ಥಿಯಾಗಿ ನೀವು ಸ್ಪರ್ಧಿಸಿ, ನಾವು ಗೆಲ್ಲಿಸುತ್ತೇವೆ ಎಂದು ವೀಣಾ ಬೆಂಬಲಿಗರು ಧ್ವನಿ ಎತ್ತಿದರು. ಟಿಕೆಟ್ ವಿಚಾರವಾಗಿ ವೀಣಾ ದಂಪತಿ ಭಾರೀ ಬೇಸರ ವ್ಯಕ್ತಪಡಿಸಿದ ಹಿನ್ನೆಲೆ ಇದೀಗ ಸಂಯುಕ್ತಾ ಪ್ರತಿಕ್ರಿಯಿಸಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ