Breaking News
Home / ರಾಜಕೀಯ / ಯೋ ಬರ್ಕೊಳಯ್ಯ ಶಿವಮೊಗ್ಗ ನಂದು

ಯೋ ಬರ್ಕೊಳಯ್ಯ ಶಿವಮೊಗ್ಗ ನಂದು

Spread the love

ಶಿವಮೊಗ್ಗ : ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು.

 

'ಯೋ ಬರ್ಕೊಳಯ್ಯ ಶಿವಮೊಗ್ಗ ನಂದು' : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು 'ಫೀದಾ'

ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ ವೇಳೆ ಸಭೆ ಒಂದರಲ್ಲಿ ನಟ ಶಿವರಾಜ್ ಕುಮಾರ್ ಅವರು ಜೋಗಯ್ಯ ಸಿನಿಮಾದ ಡೈಲಾಗ್ ಹೊಡೆದಿದ್ದು, ‘ಯೋ ಬರ್ಕೊಳಯ್ಯ ಮುಂದುಗಡೆ ಪೇಪರಲ್ಲಿ ಬರ್ಕೋ ಶಿವಮೊಗ್ಗ ನಂದು’ ಎಂದು ಜೋಗಯ್ಯ ಸಿನಿಮಾದ ಡೈಲಾಗ್ ಹೊಡೆದು ನೆರೆದಿರುವ ಕಾರ್ಯಕರ್ತರನ್ನು ರಂಜಿಸಿದರು.

 

ಈ ವೇಳೆ ಗೀತಾ ಪರ ಪ್ರಚಾರದ ವೇಳೆ ಶಿವಣ್ಣ ಹೇಳಿಕೆ ನೀಡಿದ್ದು, ಗೀತಾ ಅವರಲ್ಲಿ ರಕ್ತದಲ್ಲಿ ರಾಜಕೀಯ ಇದೆ. ಆದರೆ ನನಗೆ ಇಲ್ಲ ಬಂಗಾರಪ್ಪ ಅವರ ಮಗಳನ್ನು ಮದುವೆ ಆಗಿದ್ದೇನೆ ನಿಮ್ಮ ಮನೆ ಮಗಳಿಗೆ ಒಂದು ಉಡುಗೊರೆ ನೀಡಿ ಶಿವಮೊಗ್ಗದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡುತ್ತಾರೆ ನನಗಿಂತ ಮೊದಲು ಶಿವಮೊಗ್ಗ ಜಿಲ್ಲೆಯ ಮಗಳು ಎಂದು ಮತದಾರರಲ್ಲಿ ಶಿವಣ್ಣ ಮನವಿ ಮಾಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ