Breaking News

ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ: ನಟ ಜಗ್ಗೇಶ್

Spread the love

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರು ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರತಿ ದಿನ ರಾಯರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಂತೆಯೇ ಇದೀಗ ರಾಯರು ಹಾಗೂ ಜಗ್ಗೇಶ್ ನಡುವೆ ನಡೆದ ಮರೆಯಲಾರದ ಸತ್ಯ ಘಟನೆಯೊಂದು ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ.

ಈ ಸಂಬಂಧ ಇನ್‍ಸ್ಟಾದಲ್ಲಿ ಬರೆದುಕೊಂಡಿರುವ ನವರಸ ನಾಯಕ, ನೆನೆದವರ ಮನದಲ್ಲಿ ಗುರುರಾಯ ಎಂದು ಶೀರ್ಷಿಕೆ ಕೊಟ್ಟು ಸ್ನೇಹಿತರೆ ಇಂದು ನನ್ನ ರಾಯರ ನಡುವೆ ನಡೆದ ಮರೆಯಲಾಗದ ಘಟನೆ ಎಂದು ವಿವರಿಸಿದ್ದಾರೆ.

ರಾಯರೆ ನಾನು ಬದುಕಲ್ಲಿ ಕೇಳಿದ್ದೆಲ್ಲಾ ಕೊಟ್ಟಿದ್ದೀರಿ, ಕೊಡುತ್ತಿದ್ದೀರಿ. ನಿಮ್ಮ ಭಿಕ್ಷೆಯಿಂದ ನಾನು ಕೋಟ್ಯಂತರ ಪ್ರೀತಿಸುವ ಯೋಗ ಪಡೆದಿರುವೆ. ಆದರೆ ಪಾಪಿಯಾದ ನಾನು ನಿಮ್ಮ ಶಾಸ್ತ್ರೋಕ್ತವಾಗಿ ಭಜಿಸುವ ವಿದ್ಯೆ ಪಡೆಯಲಿಲ್ಲ. ಕಲಿಯುವ ವಯಸ್ಸಲ್ಲಿ ಅಪ್ಪ ಬಿಡಲಿಲ್ಲ. ಅಲ್ಪಸ್ವಲ್ಪ ಚಿತ್ರ ಗೀತೆ ಹಾಡುವೆ. ದಯಮಾಡಿ ನಿಮ್ಮ ಮುಂದೆ ಕೂತು ಹಾಡಲು ಆಶೀರ್ವದಿಸಿ. ಮನತುಂಬಿ ಹಾಡುವಾಸೆ ದಯಮಾಡಿ ಕರುಣಿಸಿ ಎಂದು ಪ್ರಾರ್ಥಿಸುತ್ತಿದ್ದೆ.

ಸ್ನೇಹಿತರೆ ಮಿಂಚಿನಂತೆ ಮಂತ್ರಾಲಯ ಆತ್ಮೀಯ ಸಹೋದರ ಮಠದ ಪಿಆರ್‍ಓ ನರಸಿಂಹಾಚಾರ್ ಅವರ ಮೊಬೈಲ್ ನಿಂದ ವಾಟ್ಸಾಪ್ ವೀಡಿಯೋ ಕಾಲ್ ಬಂತು. ಕರೆ ಸ್ವೀಕರಿಸಿದಾಗ ಬೃಂದಾವನ ದರ್ಶನ ಆಯಿತು. ಅಳು ತಡೆಯಲಾಗಲಿಲ್ಲ. ಮನ ಬಿಚ್ಚಿ ರಾಯರಿಗೆ ಹೇಳಿದೆ, ನನ್ನ ಮಾತು ಬೃಂದಾವನಕ್ಕೆ ಕೇಳುವ ಸೌಭಾಗ್ಯ ನನಗೆ ನೀಡಿದ ನಿಮ್ಮ ಕರುಣೆ ಸಾಕು. ಈ ಜನ್ಮಕ್ಕೆ ಇನ್ನೆಂದಿಗೂ ನನಗೆ ಮನುಜನ್ಮ ಬೇಡ. ನಿಮ್ಮ ಪಾದದಡಿಯ ಧೂಳಾಗಿ ಜನ್ಮಕೊಡಿ ಸಾಕು ಎಂದು ಪ್ರಾರ್ಥಿಸಿದೆ. ಈ ಸರಿಹೊತ್ತಲ್ಲಿ ರಾಯರ ಬೃಂದಾವನ ದರ್ಶನ ನನಗೆ ಮಾಡಿಸಲು ಏನು ಪ್ರೇರಣೆ ಆಯಿತು ಎಂದು ನರಸಿಂಹಾಜಾರ್ ಅವರನ್ನು ಕೇಳಿದೆ. ಅದಕ್ಕೆ ಅವರು ಬೃಂದಾವನ ಅಲಂಕಾರ ತೆಗೆಯಬೇಕಾದರೆ ಅಲ್ಲೆ ನಿಂತಿದ್ದೆ. ಇದ್ದಕ್ಕಿದ್ದಂತೆ ಜಗ್ಗೇಶನಿಗೆ ಬೃಂದಾವನ ತೋರಿಸುವಂತೆ ರಾಯರ ಪ್ರೇರಣೆ ಆಯಿತು ಎಂದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ