Breaking News
Home / ರಾಜ್ಯ / ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 2 ಕೋಟಿ ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ಕನ್ನಡಕ್ಕಿಂತ ಮರಾಠಿನೇ ಮುಖ್ಯನಾ?

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 2 ಕೋಟಿ ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ಕನ್ನಡಕ್ಕಿಂತ ಮರಾಠಿನೇ ಮುಖ್ಯನಾ?

Spread the love

ಬೆಂಗಳೂರು: ಉಪ ಚುನಾವಣೆ ಗೆಲ್ಲಲು ಬಿಜೆಪಿ ಮರಾಠಿ ಮಂತ್ರ ಜಪಿಸುತ್ತಿದ್ದು, ರಾಜ್ಯದಲ್ಲಿ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ನಿಗಮ ಕರುನಾಡಿನಲ್ಲಿ ಕಿಚ್ಚು ಹೊತ್ತಿಸಿದೆ.
ಬಿಎಸ್‍ವೈ ಸರ್ಕಾರ ಶಿರಾ ಬೈ ಎಲೆಕ್ಷನ್ ಗೆಲ್ಲಲು ಕಾಡುಗೊಲ್ಲ ಸಮುದಾಯದ ಅಭಿವೃದ್ಧಿ ನಿಗಮ ರಚಿಸಿ, 50 ಕೋಟಿ ಮೀಸಲಿರಿಸಿತ್ತು. ಎರಡು ದಿನಗಳ ಹಿಂದೆ ಮಠ ಮಾನ್ಯಗಳಿಗೆ 88 ಕೋಟಿ ರೂಪಾಯಿಯ ಹೊಳೆ ಹರಿಸಿತ್ತು. ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಗೆಲ್ಲುವ ಸಲುವಾಗಿ ನಿನ್ನೆಯಷ್ಟೇ ಮರಾಠ ಅಭಿವೃದ್ಧಿ ನಿಗಮ ರಚಿಸಿ, ಅದಕ್ಕೂ 50 ಕೋಟಿ ಮೀಸಲಿರಿಸಿದೆ. ಮರಾಠ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚೌಹಾಣ್ ಬಹಿರಂಗವಾಗಿ ಘೋಷಿಸಿದ್ದಾರೆ.

ಈ ಮೂಲಕ ಸಮುದಾಯಗಳ ಓಲೈಕೆ ಪಾಲಿಟಿಕ್ಸ್ ನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ. ಕಾರಣ ಬಸವ ಕಲ್ಯಾಣದಲ್ಲಿ ಮರಾಠ ಸಮುದಾಯದ 40 ಸಾವಿರ ಮತಗಳು ಇವೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕೂಡ ಯಾರೇ ಗೆಲ್ಲಬೇಕಿದ್ರೂ ಮರಾಠ ಸಮುದಾಯದ ಬೆಂಬಲ ಬೇಕೇಬೇಕು. ಅಲ್ಲಿ ಅಂದಾಜು 6 ಲಕ್ಷಕ್ಕೂ ಹೆಚ್ಚು ಮರಾಠ ಮತಗಳಿವೆ. ಈ ಮತಗಳನ್ನು ಗುರಿಯಾಗಿಸಿಕೊಂಡೇ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಅಸ್ತ್ರವನ್ನು ಬಿಎಸ್‍ವೈ ಸರ್ಕಾರ ಪ್ರಯೋಗಿಸಿದೆ. ಇದನ್ನೂ ಓದಿ: ದುರ್ದೈವದಿಂದ KSRTC, BMTC ನೌಕರರ ಸಂಬಳ ನೀಡಲು ಆಗಿಲ್ಲ: ಲಕ್ಷ್ಮಣ ಸವದಿ

ಕೇವಲ ಮತಕ್ಕಾಗಿ ನಾಡದ್ರೋಹಿಗಳು ಎನಿಸಿಕೊಂಡ ಮರಾಠ ಸಮುದಾಯವನ್ನು ಈ ರೀತಿ ಓಲೈಸುವುದು ಎಷ್ಟು ಸರಿ ಅನ್ನೋದು ಕನ್ನಡ ಪರ ಹೋರಾಟಗಾರರ ಪ್ರಶ್ನೆ. ಸರ್ಕಾರ ಕೂಡಲೇ ಅಭಿವೃದ್ಧಿ ನಿಗಮ ರಚನೆಯ ಆದೇಶವನ್ನು ಹಿಂಪಡೆಯಬೇಕು. ಇಲ್ಲದೇ ಇದ್ರೇ ನಾಡಿದ್ದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರರು ಎಚ್ಚರಿಸ್ತಿದ್ದಾರೆ.

ಬೆಳಗಾವಿ- ಮರಾಠ ಸಮುದಾಯದ ಓಲೈಕೆ ಏಕೆ?
ಬೆಳಗಾವಿಯ 17 ಲಕ್ಷ ಮತಗಳ ಪೈಕಿ 6.5 ಲಕ್ಷಕ್ಕೂ ಹೆಚ್ಚು ಮರಾಠ ಮತಗಳಿವೆ. ಮರಾಠ ಸಮುದಾಯದ ಬೆಂಬಲ ಗಿಟ್ಟಿಸಿದ್ದ ಬಿಜೆಪಿಯ ಸುರೇಶ್ ಅಂಗಡಿ ಈಗಿಲ್ಲ. ಸುರೇಶ್ ಅಂಗಡಿ ಅನುಪಸ್ಥಿತಿಯಲ್ಲಿ ಮರಾಠ ವೋಟ್ ಬ್ಯಾಂಕ್ ಛಿದ್ರವಾಗುವ ಭೀತಿ ಬಿಜೆಪಿಗೆ ಕಾಡುತ್ತಿದೆ. ಮಹಾರಾಷ್ಟ್ರದ ರಾಜಕೀಯ ಉಪ ಲೋಕಸಮರದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್ ಜೊತೆ ಶಿವಸೇನೆ ಇರುವ ಕಾರಣ, ಮರಾಠ ಮತಗಳು ಕೈಗೆ ಹೋಗುವ ಸಂಭವ ಹೆಚ್ಚು ಎನ್ನಲಾಗಿದೆ. ಹೀಗಾಗಿಯೇ ಮರಾಠ ಸಮುದಾಯದ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ನಿಗಮ ರಚಿಸಿದೆ ಎಂದು ಹೇಳಲಾಗುತ್ತಿದೆ.

ಬಸವಕಲ್ಯಾಣ- ಮರಾಠ ಸಮುದಾಯದ ಓಲೈಕೆ ಏಕೆ?
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ 2.40 ಲಕ್ಷ ಮತಗಳನ್ನು ಹೊಂದಿದೆ. ಇದರಲ್ಲಿ ಮರಾಠ ಸಮುದಾಯದ ಅಂದಾಜು 45,000 ಮತಗಳಿವೆ. ಇಲ್ಲಿ ಯಾರೇ ಗೆಲ್ಲಬೇಕಿದ್ದರೂ ಮರಾಠ ಮತಗಳು ಬೇಕೇಬೇಕು. ಬಸವಕಲ್ಯಾಣದ ಮೇಲೆಯೂ ‘ಮಹಾ’ ಪಾಲಿಟಿಕ್ಸ್ ಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚು. ಹೀಗಾಗಿಯೇ, ಸಮುದಾಯದ ಓಲೈಕೆಗಾಗಿ ಮರಾಠ ಅಭಿವೃದ್ಧಿ ನಿಗಮದ ಅಸ್ತ್ರ ಪ್ರಯೋಗಿಸಿದೆ ಎಂಬುವುದು ರಾಜಕೀಯ ಅಂಗಳದ ಮಾತು.

ವಿರೋಧ ಏಕೆ?: ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದಿಂದ ಕಡಿಮೆ ಅನುದಾನ ನೀಡಲಾಗಿದೆ. ಈ ವರ್ಷ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕೇವಲ 2 ಕೋಟಿ ರೂ. ನೀಡಲಾಗಿದೆ. ಈ ಮೊದಲು ವಾರ್ಷಿಕ 5 ಕೋಟಿ ರೂ. ನೀಡಲಾಗಗುತ್ತಿತ್ತು. 2 ಕೋಟಿ ಎಲ್ಲಿ?50 ಕೋಟಿ ಎಲ್ಲಿ? ಕನ್ನಡಕ್ಕಿಂತ ಮರಾಠಿನೇ ಮುಖ್ಯನಾ ಎಂದು ಕನ್ನಡ ಪರ ಹೋರಾಟಗಾರರು ಪ್ರಶ್ನೆ ಮಾಡುತ್ತಿದ್ದಾರೆ.
ಪ್ರತಿ ವರ್ಷ ನ.1ರಂದು ಮರಾಠಿಗರಿಂದ ಕರಾಳ ದಿನ ಆಚರಣೆ ಮಾಡುತ್ತಾರೆ. ಹೀಗಿದ್ದರೂ ಮರಾಠಿ ಸಮುದಾಯದ ಮೇಲೆ ಸರ್ಕಾರಕ್ಕೆ ಪ್ರೀತಿ ಏಕೆ?. ಹೀಗಾಗಿಯೇ ಕನ್ನಡ ಪರ ಹೋರಾಟಗಾರರಿಂದ ಮರಾಠ ನಿಗಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಬೊಕ್ಕಸದಲ್ಲಿ ದುಡ್ಡಿಲ್ಲ ಎಂಬ ನೆಪ ಹೆಳಿ, ವಿವಿಧ ಪ್ರಶಸ್ತಿಗಳು, ಪಿಹೆಚ್‍ಡಿ, ಎಂಫಿಲ್ ಮಾಡೋರ ವಿದ್ಯಾರ್ಥಿ ವೇತನಕ್ಕೂ ಕತ್ತರಿ ಹಾಕಿರೋದು ಕನ್ನಡ ಪರ ಹೋರಾಟಗಾರರನ್ನು ಸಿಟ್ಟಿಗೆಬ್ಬಿಸಿದೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ