Breaking News

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ.

Spread the love

ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರದಿಂದಾಗಿ ಕೆರೆ, ಹೊಳೆ, ಹಳ್ಳ, ಬೋರ್‌ವೆಲ್‌ಗಳು ಬತ್ತಿವೆ. ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ಕಲ್ಲಂಗಡಿ, ಅರಿಸಿನ ಮುಂತಾದವುಗಳ ಇಳುವರಿ ಕುಸಿಯಲು ಇದು ಕಾರಣವಾಗಿದೆ.

ಚಿಕ್ಕೋಡಿ | ಬರದ ಬರೆ: ಬಾಡಿದ ತೋಟಗಾರಿಕೆ ಬೆಳೆ

ಅಥಣಿ ತಾಲ್ಲೂಕಿನಲ್ಲಿ ದ್ರಾಕ್ಷಿ, ಚಿಕ್ಕೋಡಿ ತಾಲ್ಲೂಕಿನಲ್ಲಿ ಕಲ್ಲಂಗಡಿ, ಕಾಗವಾಡ ತಾಲ್ಲೂಕಿನಲ್ಲಿ ಹಸಿ ಮೆಣಸಿನಕಾಯಿ, ರಾಯಬಾಗ ತಾಲ್ಲೂಕಿನಲ್ಲಿ ಅರಿಸಿನ, ನಿಪ್ಪಾಣಿ ತಾಲ್ಲೂಕಿನಲ್ಲಿ ತರಕಾರಿ ಹೆಚ್ಚಾಗಿ ಬೆಳೆದಿದ್ದಾರೆ.

ನೀರಿಲ್ಲದೇ ತೋಟಗಾರಿಕೆ ಬೆಳೆಯ ಇಳುವರಿ ಈ ಬಾರಿ ಕುಂಠಿತವಾಗಿದೆ. ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ಬೆಳೆದವರಿಗೆ ಅಷ್ಟೇನೂ ತೊಂದರೆ ಇಲ್ಲ.

ಪ್ರತಿ ವರ್ಷಕ್ಕೆ ಹೋಲಿಸಿದರೆ ತೋಟಗಾರಿಕೆ ಬೆಳೆಯ ಪ್ರಮಾಣದಲ್ಲಿ ಈ ವರ್ಷ ಶೇ 10ರಿಂದ ಶೇ15 ರಷ್ಟು ಕಡಿಮೆಯಾಗಿದೆ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ. ಹೀಗಾಗಿ ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ತರಕಾರಿ ಹಾಗೂ ಹಣ್ಣುಗಳ ಲಭ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ